LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

2024ರ NEET-UG ಫಲಿತಾಂಶ ​ಪ್ರಕಟ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ವೈದ್ಯಕೀಯ ಪ್ರವೇಶಕ್ಕಾಗಿ ನಡೆದ 2024ರ NEET UG ಫಲಿತಾಂಶವನ್ನು ಇಂದು (ಶನಿವಾರ) ಕೇಂದ್ರ ಮತ್ತು ನಗರವಾರು ರಿಸಲ್ಟ್​ ಪ್ರಕಟಿಸಲಾಗಿದೆ. ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು NTA NEET ಅಧಿಕೃತ ವೆಬ್‌ಸೈಟ್- exams.nta.ac.in/NEET/ ನಲ್ಲಿ ಹಾಗೂ neet.ntaonline.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.


ಜುಲೈ 18 ರಂದು ಸುಪ್ರೀಂ ಕೋರ್ಟ್, ಎನ್‌ಟಿಎಗೆ ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್ ಯುಜಿ ಫಲಿತಾಂಶಗಳನ್ನು ಪ್ರಕಟಿಸಲು ಆದೇಶಿಸಿತ್ತು. ಸುಪ್ರೀಂ ಕೋರ್ಟ್​ ತನ್ನ ವೆಬ್‌ಸೈಟ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲು ಎನ್​ಟಿಎಗೆ ಹೇಳಿತ್ತು. ಆದರೆ, ವಿದ್ಯಾರ್ಥಿಗಳ ಗುರುತನ್ನು ಬಹಿರಂಗಪಡಿಬಾರದು. ಇಂದು ಮಧ್ಯಾಹ್ನದೊಳಗೆ ನಗರ ಮತ್ತು ಕೇಂದ್ರವಾರು NEET ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡುವಂತೆ ಸಿಜೆಐ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಆದೇಶ ಹೊರಡಿಸಿತ್ತು.


ಈ ವರ್ಷ, NTA NEET ಯುಜಿ ಪರೀಕ್ಷೆಯನ್ನು ಮೇ 5 ರಂದು 4,750 ಕೇಂದ್ರಗಳಲ್ಲಿ ನಡೆಸಲಾಗಿತ್ತು. NEET UG ಫಲಿತಾಂಶಗಳನ್ನು 2024ರ ಜೂನ್ 4 ರಂದು ಘೋಷಿಸಲಾಗಿತ್ತು. ಮರು ಪರೀಕ್ಷೆಯನ್ನು ಜೂನ್ 23ರಂದು ನಡೆಸಲಾಗಿತ್ತು. ಈ ವರ್ಷ ಸುಮಾರು 24 ಲಕ್ಷ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. 1,563 ಅಭ್ಯರ್ಥಿಗಳು ಮರು ಪರೀಕ್ಷೆಗೆ ಹಾಜರಾಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್