LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಿಟಿಡಿಎ ಆಡಳಿತಕ್ಕೆ ಹೊಸ ರೂಪ : ಪ್ರಕಾಶ ತಪಶೆಟ್ಟಿ

ಬಾಗಲಕೋಟೆ : ಮೇ ೦೮: ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಆಡಳಿತಕ್ಕೆ ಹೊಸ ರೂಪ ನೀಡುವ ಮೂಲಕ ಜನಪರ ಹಾಗೂ ಪಾದರ್ಶಕ ಆಡಳಿತಕ್ಕೆ ಆದ್ಯತೆ ನೀಡಲಾಗುವುದೆಂದು ಬಿಟಿಡಿಎ ನೂತನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಹೇಳಿದರು.
ಬಿಟಿಡಿಎ ಕಚೇರಿಯಲ್ಲಿ ಶುಕ್ರವಾರ ಬಿಟಿಡಿಎ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಸಂಸ್ಥೆಯ ಅಭಿವೃದ್ದಿ, ಸಾರ್ವಜನಿಕರ, ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ, ಮೂಲಭೂತ ಸೌಲಭ್ಯಗಳ ವೃದ್ದಿ ಹಾಗೂ ಸಮಗ್ರ ಅಭಿವೃಧ್ದಿಗೆ ಹೆಚ್ಚಿನ ಒತ್ತು ನೀಡಲಾಗುವುದೆಂದು ತಿಳಿಸಿದರು. 
ಮುಳುಗಡೆ ಸಂತ್ರಸ್ಥರಿಗೆ ಪುನರ್ವಸತಿ ಹಾಗೂ ಪುನರ್ ನಿರ್ಮಾಣದ ಕೆಲಸ ಸಮರ್ಪಕವಾಗಿ ಆಗಬೇಕಿದೆ. ಸಾರ್ವಜನಿಕರು, ಸಂತ್ರಸ್ತರು ಪದೇ ಪದೇ ಕಚೇರಿಗೆ ಬರುದನ್ನು ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜಾಗೃತಿಯಿಂದ, ಸುರಕ್ಷತೆಯಿಂದ ಸಾರ್ವಜನಿಕರ ತೊಂದರೆ ಹಾಗೂ ಬೇಡಿಕೆಗಳಿಗೆ ಸ್ಪಂದಿಸಿ, ಪಾರದರ್ಶಕವಾಗಿ ಕೆಲಸ ಕಾರ್ಯಗಳು ಆಗುವ ರೀತಿಯಲ್ಲಿ ಆಡಳಿತದಲ್ಲಿ ಸುಧಾರಣೆ ತರುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
ಸರಕಾರದ ಆಶಯಗಳಿಗೆ ಅನುಗುಣವಾಗಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಅಭಿವೃದ್ದಿಯ ಕಾಮಗಾರಿಗಳಲ್ಲಿ ಹೊಸ ಚೈತನ್ಯ ಮೂಡಿಸಲಾಗುವುದು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ. ಸಾರ್ವಜನಿಕರ, ಸಂತ್ರಸ್ತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವುದರ ಜೊತೆಗೆ ಪದೇ ಪದೇ ಅಲೆದಾಡುವದನ್ನು ತಪ್ಪಿಸುವ ಕೆಲಸ ಮಾಡಲಾವುದೆಂದು ತಿಳಿಸಿದ ಅವರು ಜನರಿಗೆ ಗುಣಮಟ್ಟದ ಸೇವೆ ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದರು.
ಬಿಟಿಡಿಎ ಆಡಳಿತವನ್ನು ಇನ್ನಷ್ಟು ಜನಸ್ನೇಹಿ, ಪಾರದರ್ಶಕ ಹಾಗೂ ಅಭಿವೃದ್ದಿ ಮುಖಿಯಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ಸಂತ್ರಸ್ತರಿಗೆ ನಿವೇಶನಗಳ ಹಂಚಿಕೆ, ತಾಂತ್ರಿಕ ದೋಷಗಳು ಸೇರಿದಂತೆ ಒಟ್ಟಾರೆಯಾಗಿ ಸಂತ್ರಸ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ರೀತಿಯ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತದೆ. ಯಾವ ಮಧ್ಯವರ್ತಿಗಳ ಹಸ್ತಕ್ಷೇಪ ಆಗದಂತೆ ನೋಡಿಕೊಳ್ಳಲಾಗುವುದು. ಈ ಕಾರ್ಯಕ್ಕೆ ಸಾರ್ವಜನಿಕರ, ಅಧಿಕಾರಿಗಳ ಸಹಕಾರ ಅಗತ್ಯವಾಗಿ ಬೇಕಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಶಾಸಕ ಉಮೇಶ ಮೇಟಿ, ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಮುಖ್ಯ ಇಂಜಿನೀಯರ್ ಚಂದ್ರಹಾಸ ಬಂಡಿ, ಕಾರ್ಯನಿರ್ವಾಹಕ ಅಭಿಯಂತರ ವಾಯ್.ಬಿ.ಪಾತ್ರೋಟ, ಪುನರ್ವಸತಿ ಅಧಿಕಾರಿ ಪ್ರಶಾಂತ ಬಾರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು.  

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್