LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಿಜಲಿಂಗಪ್ಪ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಯ ಸಾಧನೆ

ವಿಕಸಿತ ಭಾರತ ಯುವನಾಯಕರ ಸಂವಾದದಲ್ಲಿ ವಿಚಾರ ಮಂಡಿಸಿದ ಶುಭಂ ಡಂಗಿ


ಬಾಗಲಕೋಟೆ- ನಗರದ ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಎಮ್.ಬಿ.ಬಿ.ಎಸ್ ತೃತೀಯ ವರ್ಷದ ವಿದ್ಯಾರ್ಥಿ ಶುಭಂ ಡಂಗಿ ಅವರು ’ವಿಕಸಿತ ಭಾರತ ಯುವನಾಯಕರ ಸಂವಾದ-೨೦೨೬’ ಕಾರ್ಯಕ್ರಮದಲ್ಲಿ ತಮ್ಮ ವಿಚಾರ ಮಂಡಿಸಿ ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿರುವರು. ಜನೆವರಿ ತಿಂಗಳಲ್ಲಿ ನವದೆಹಲಿಯಲ್ಲಿ ಆಯೋಜಿಸಿದ್ದ ’ವಿಕಸಿತ ಭಾರತ ಯುವನಾಯಕರ ಸಂವಾದ-೨೦೨೬’ ಕಾರ್ಯಕ್ರಮದಲ್ಲಿ ವಿಕಸಿತ ಭಾರತಕ್ಕಾಗಿ ಭವಿಷ್ಯದ ಕಾರ್ಯಯೋಜನೆ ವಿಷಯದ ಕುರಿತು ತಮ್ಮ ವಿಚಾರ ಮಂಡಿಸಿದರು. ದೇಶದ ಪ್ರಧಾನ ಮಂತ್ರಿಗಳೊಂದಿಗೆ ಯುವನಾಯಕರು ತಮ್ಮ ಆಲೋಚನೆಗಳನ್ನು ನೇರವಾಗಿ ಹಂಚಿಕೊಳ್ಳುವ ವಿಶಿಷ್ಟ ವೇದಿಕೆ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ, ರಕ್ಷಾ ಖಡ್ಸೆ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಉಪಸ್ಥಿತರಿದ್ದರು.

ಪ್ರತಿವರ್ಷ ದೇಶದ ವಿವಿಧ ರಾಜ್ಯಗಳಿಂದ ಯುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ’ವಿಕಸಿತ ಭಾರತ ಯುವನಾಯಕರ ಸಂವಾದ’ದಲ್ಲಿ ವಿವಿಧ ವಿಷಯಗಳ ಕುರಿತು ತಮ್ಮ ವಿಚಾರಗಳನ್ನು ಮಡಿಸಲು ಅವಕಾಶ ನೀಡಲಾಗುತ್ತದೆ. ಇದಕ್ಕೆ ಪೂರ್ವಭಾವಿಯಾಗಿ ರಾಜ್ಯಮಟ್ಟದಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸ್ವಯಂ ಸೇವಾ ಘಟಕ ಹಾಗೂ ಯುವ ಸಬಲೀಕರಣ ಇಲಾಖೆ ಇವುಗಳ ಸಹಯೋಗದಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಕರ್ನಾಟಕದಿಂದ ಒಟ್ಟು ೪೫ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಈ ಆಯ್ಕೆಯ ಸಂದರ್ಭ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿ ಶುಭಂ ಡಂಗಿ ಎಲ್ಲ ಮೂರು ಸುತ್ತುಗಳಲ್ಲಿ ವಿಜೇತರಾಗಿ ’ಸಂವಾದ-೨೦೨೬’ರಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದರು. ಕರ್ನಾಟಕದಿಂದ ಆಯ್ಕೆಯಾದ ೪೫ ವಿದ್ಯಾರ್ಥಿಗಳಲ್ಲಿ ಇವರೊಬ್ಬರೆ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು ವಿಶೇಷವಾಗಿತ್ತು.

ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸತತ ಎರಡನೇ ವರ್ಷ ’ವಿಕಸಿತ ಭಾರತ ಯುವನಾಯಕರ ಸಂವಾದ’ದಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ತಮ್ಮ ವಿಚಾರ ಮಂಡಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿರುವ ವಿದ್ಯಾರ್ಥಿ ಶುಭಂ ಡಂಗಿ ಅವರನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಎನ್.ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜಿನ ಪ್ರಾಚಾರ್ಯೆ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಹಾಗೂ ಎಲ್ಲ ವಿಭಾಗಗಳ ವೈದ್ಯರು ಮತ್ತು ಸಿಬ್ಬಂದಿ ಅಭಿನಂದಿಸಿರುವರು. ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಪಕರಾದ ಡಾ.ಉಮೇಶ ರಾಮದುರ್ಗ ಮತ್ತು ಡಾ.ಶ್ರೀನಿವಾಸ ಪಾಟೀಲ ಈ ಸಂದರ್ಭ ಉಪಸ್ಥಿತರಿದ್ದರು.

---೦೦೦---

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್