LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

NDA ಅಭ್ಯರ್ಥಿಗಳಿಂದ ನಿರ್ಮಲಾನಂದ ಶ್ರೀ ಭೇಟಿ: ಕಾಂಗ್ರೆಸ್ 'ಒಕ್ಕಲಿಗ' ಅಸ್ತ್ರಕ್ಕೆ BJP ಟಕ್ಕರ್

ಬೆಂಗಳೂರು,ಏಪ್ರಿಲ್​ 11: ಲೋಕಸಭೆ ಚುನಾವಣೆ 2024 ಕಣ ದಿನಕಳದಂತೆ ರಂಗೇರಿದ್ದು, ರಾಜಕೀಯ ಪಕ್ಷಗಳ ಏಟು-ಎದಿರೇಟು ಪ್ರಹಸನ ಎಗ್ಗಿಲ್ಲದೇ ನಡೆಯುತ್ತಿದೆ.

ಇದಕ್ಕೆ ಇಂಬು ನೀಡುವಂತೆ ಸಿಎಂ ಸಿದ್ದರಾಮಯ್ಯ ಪ್ರಯೋಗಿಸಿದ್ದ ಒಕ್ಕಲಿಗ ಅಸ್ತ್ರಕ್ಕೆ ತಿರುಗೇಟು ನೀಡಿರುವ ಬಿಜೆಪಿ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಎನ್ ಡಿಎ ಒಕ್ಕೂಟ ತನ್ನ ಎಲ್ಲ ಕರ್ನಾಟಕದ ಅಭ್ಯರ್ಥಿಗಳನ್ನು ಒಕ್ಕಲಿಗ ಒಕ್ಕಲಿಗ ಮಠಾಧೀಶರಾದ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿಸುವ ಮೂಲಕ ಪ್ರತಿದಾಳ ಉರುಳಿಸಿದೆ.

ಮೊನ್ನೆ ಮೊನ್ನೆಯಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಒಕ್ಕಲಿಗ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್​ ತಪ್ಪಿಸಿ ಅರಸು ಮನೆತನಕ್ಕೆ ಟಿಕೆಟ್​ ಕೊಟ್ಟಿದ್ದಾರೆ. ನಾವು ಒಕ್ಕಲಿಗರಾದ ಎಂ.ಲಕ್ಷ್ಮಣ್​ಗೆ ಟಿಕೆಟ್​ ಕೊಟ್ಟಿದ್ದೇವೆ ಎಂದಿದ್ದರು. ಇದೇ ದಾಳಕ್ಕೆ ಪ್ರತಿಯಾಗಿ ಇದೀಗ ಬಿಜೆಪಿ ಕೂಡ ಪ್ರತಿದಾಳ ಉರುಳಿಸಿದೆ. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಮೈತ್ರಿ ಒಕ್ಕಲಿಗ ನಾಯಕರು ಭೇಟಿ ನೀಡುವ ಮೂಲಕ ಒಗ್ಗಟ್ಟು-ಶಕ್ತಿ ಪ್ರದರ್ಶಿಸಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್, ಅಶ್ವತ್ಥ್​ ನಾರಾಯಣ, ಡಾ.ಸಿ.ಎನ್.ಮಂಜುನಾಥ್, ಕುಮಾರಸ್ವಾಮಿ ಜೊತೆಗೆ ಯದುವೀರ್ ಒಡೆಯರ್ ಸಹ ಮಠಕ್ಕೆ ಭೇಟಿ ಶ್ರೀಗಳ ಆಶೀರ್ವಾದ ಪಡೆದರು.

ಜೆಡಿಎಸ್ ನಾಯಕ ಮತ್ತು ಮಂಡ್ಯ ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ, ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ, ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಕೋಲಾರ ಎನ್‌ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಮತ್ತು ಬೆಂಗಳೂರು ಕೇಂದ್ರ ಬಿಜೆಪಿ ಅಭ್ಯರ್ಥಿ. ಪಿ.ಸಿ.ಮೋಹನ್ ಶ್ರೀಗಳನ್ನು ಸನ್ಮಾನಿಸಿ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, 'ಯುಗಾದಿ ಹಬ್ಬದ ನಂತರ ಹೊಸ ವರ್ಷದ ಮೊದಲ ದಿನವಾಗಿದ್ದು, ಮೊದಲ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಕರ್ನಾಟಕದ 14 ಅಭ್ಯರ್ಥಿಗಳು ಶ್ರೀಗಳ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ