LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾವೇರಿ ರುದ್ರ ನರ್ತನ: ಪ್ರವಾಸಿಗರಿಗೆ ನೋ ಎಂಟ್ರಿ

ಚಾಮರಾಜನಗರ: ಭಾರತದ ನಯಾಗರ ಎಂದೇ ಕರೆಯುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಾದ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಅಪಾಯ ಮಟ್ಟದಲ್ಲಿ ನೀರು ಭೋರ್ಗರೆಯುತ್ತಿದೆ. ಕಬಿನಿ ಹೊರಹರಿವು ಮತ್ತು ಭಾರಿ ಮಳೆಯಿಂದ ಹೊಗೆನಕಲ್​ನಲ್ಲಿ ಕಾವೇರಿ ರೌದ್ರ ನರ್ತನವಾಡುತ್ತಿದ್ದಾಳೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾವೇರಿ ವನ್ಯಜೀವಿಧಾಮವು ಜು.20 ರಿಂದ ಹೊಗೆನಕಲ್​ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.

ಈಗಾಗಲೇ ಕಬಿನಿಯಿಂದ 70 ಸಾವಿರ ಕ್ಯೂಸೆಕ್ ಹೊರಹರಿವಿದ್ದು ಹೊಗೆನಕಲ್​ನಲ್ಲಿ ಕಾವೇರಿ ರಭಸದಿಂದ ಹರಿಯುತ್ತಿದೆ. ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿರುವುದರಿಂದ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ‌. ನೀರಿನ ಹರಿವು ಕಡಿಮೆಯಾಗುವ ತನಕ ಹೊಗೆನಕಲ್​ಗೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ. ತಾತ್ಕಾಲಿಕ ನಿರ್ಬಂಧ ಇದ್ದು ಅದಾದ ಬಳಿಕ ಮುಂದಿನ ಕ್ರಮ‌ ಕೈಗೊಳ್ಳುತ್ತೇವೆ ಎಂದು ಹೊಗೆನಕಲ್ ಆರ್​ಎಫ್​ಒ ಸಂಪತ್ ಪಟೇಲ್ ತಿಳಿಸಿದ್ದಾರೆ.


ಕರ್ನಾಟಕ, ತಮಿಳುನಾಡು ಎರಡೂ ರಾಜ್ಯದ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ಕೊಡುವ ಜನಪ್ರಿಯ ಜಲಪಾತ ಇದಾಗಿದ್ದು, ಕಳೆದ 4 ದಿನದಿಂದ ತಮಿಳುನಾಡು ಭಾಗದಲ್ಲಿ ಬೋಟಿಂಗ್, ಪ್ರವಾಸಿಗರಿಗೆ ನಿರ್ಬಂಧ ಹೇರಿದೆ. ಜು.20 ರಿಂದ ಕರ್ನಾಟಕದ ಭಾಗದಲ್ಲೂ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್