LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ ವಿಫಲವೆಂದ ದಕ್ಷಿಣ ಕೊರಿಯಾ ಮಿಲಿಟರಿ



ಸಿಯೋಲ್​: ಉತ್ತರ ಕೊರಿಯಾವು, ಕೊರಿಯನ್​ ಪೆನಿನ್ಸುಲಾದ ಪೂರ್ವ ಕರಾವಳಿಯ ಸಮುದ್ರದ ಕಡೆಗೆ ಅಜ್ಞಾತ ಬ್ಯಾಲಿಸ್ಟಿಕ್​ ಕ್ಷಿಪಣಿ ಉಡಾವಣೆ ಮಾಡಿದ್ದು, ಅದು ಬಹುತೇಕ ವಿಫಲವಾಗಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ಬುಧವಾರ ತಿಳಿಸಿದೆ.


ಬುಧವಾರ ಬೆಳಗ್ಗೆ 5.30ರ ಸುಮಾರಿಗೆ ಉತ್ತರ ಕೊರಿಯಾ ತನ್ನ ರಾಜಧಾನಿ ಪ್ರದೇಶದಿಂದ ಬ್ಯಾಲಿಸ್ಟಿಕ್​ ಕ್ಷಿಪಣಿಯನ್ನು ಉಡಾವಣೆ ಮಾಡಿದೆ. ಕ್ಷಿಪಣಿಯನ್ನು ಉತ್ತರ ಪೂರ್ವದ ಕರಾವಳಿ ಸಮುದ್ರದ ಕಡೆಗೆ ಉಡಾಯಿಸಲಾಗಿದೆ. ಆದರೆ ಆ ಉಡಾವಣೆ ಬುಹುತೇಕ ವಿಫಲವಾಗಿದೆ ಎಂದು ಶಂಕಿಸಲಾಗಿದೆ ಎಂದು ದಕ್ಷಿಣ ಕೊರಿಯಾ ಜಂಟಿ ಮುಖ್ಯಸ್ಥರು ತಿಳಿಸಿದ್ದಾರೆ.


ಉತ್ತರ ಕೊರಿಯಾದ ಕ್ಷಿಪಣಿ ನೆಲದ ಮೇಲೆ ಅಪ್ಪಳಿಸಿರಬಹುದು ಅಥವಾ ಗಾಳಿಯಲ್ಲಿ ಸ್ಫೋಟಗೊಂಡಿದೆಯೇ ಎನ್ನುವುದರ ಬಗ್ಗೆ ಹೆಚ್ಚಿನ ವಿವರಗಳನ್ನು ಅದು ನೀಡಿಲ್ಲ. ಆದರೆ, ಜಪಾನ್​ ರಕ್ಷಣಾ ಸಚಿವಾಲಯ, ಉತ್ತರ ಕೊರಿಯಾದ ಶಂಕಿತ ಬ್ಯಾಲಿಸ್ಟಿಕ್​ ಕ್ಷಿಪಣಿಯೊಂದನ್ನು ಪತ್ತೆ ಮಾಡಿರುವುದಾಗಿ ಬುಧವಾರ ತಿಳಿಸಿದೆ. ಈ ಕ್ಷಿಪಣಿಯು ಸುಮಾರು 100 ಕಿ.ಮೀ. ಎತ್ತರಕ್ಕೆ ಹಾಗೂ 200 ಕಿ.ಮೀಗೂ ಹೆಚ್ಚು ವ್ಯಾಪ್ತಿಯವರೆಗೆ ಹಾರಿದೆ ಎಂದು ಜಪಾನ್​ ರಕ್ಷಣಾ ಸಚಿವಾಲಯ ತಿಳಿಸಿದೆ.







ಈ ವಾರದ ಆರಂಭದಲ್ಲಿ ಉತ್ತರ ಕೊರಿಯಾ, ದಕ್ಷಿಣ ಕೊರಿಯಾ, ಜಪಾನ್​ನೊಂದಿಗೆ ತ್ರಿಪಕ್ಷೀಯ ಸಮರಾಭ್ಯಾಸಕ್ಕೆ ಅಮೆರಿಕ​ ವಿಮಾನವಾಹಕ ನೌಕೆಯನ್ನು ನಿಯೋಜನೆ ಮಾಡಿದ್ದ ಕುರಿತು ಟೀಕೆ ಮಾಡಿತ್ತು. ಜೊತೆಗೆ ಪ್ರತಿಬಂಧದ ಹೊಸ ಪ್ರದರ್ಶನ ಎಂದು ಎಚ್ಚರಿಕೆ ನೀಡಿತ್ತು.


ಮತ್ತೆ ತನ್ನ ಚಾಳಿ ಮುಂದುವರಿಸಿರುವ ಉತ್ತರ ಕೊರಿಯಾವು ಸತತ ಎರಡನೇ ದಿನವೂ ದಕ್ಷಿಣ ಕೊರಿಯಾದ ಗಡಿ ಉದ್ದಕ್ಕೂ ಕಸ ತುಂಬಿದ್ದ ಬೃಹತ್​ ಬಲೂನ್​ಗಳನ್ನು ತೇಲಿಬಿಟ್ಟಿತ್ತು. ಈ ಬಗ್ಗೆ ದಕ್ಷಿಣ ಕೊರಿಯಾ ಟೀಕಿಸಿದ ಬೆನ್ನಲ್ಲೇ ಉತ್ತರ ಕೊರಿಯಾ, ಕ್ಷಿಪಣಿ ಉಡಾವಣೆ ಮಾಡಿರುವ ಬಗ್ಗೆ ಮಾಹಿತಿ ನೀಡಿದೆ. ಅದಲ್ಲದೇ ಮಂಗಳವಾರವಷ್ಟೇ ಕೊರಿಯನ್​ ಯುದ್ಧ ಪ್ರಾರಂಭದ 74ನೇ ವರ್ಷದ ವಾರ್ಷಿಕೋತ್ಸವದ ನೆನಪಿಗಾಗಿ ಪ್ಯೋಂಗ್ಯಾಂಗ್​ನಲ್ಲಿ ಸಾಮೂಹಿಕ ರ‍್ಯಾಲಿ ನಡೆಸಲಾಯಿತು. 'ಅಮೆರಿಕದ ಸಾಮ್ರಾಜ್ಯಶಾಹಿ ವಿರುದ್ಧದ ಹೋರಾಟದ ದಿನ' ಎಂದು ಇದನ್ನು ಉತ್ತರ ಕೊರಿಯಾ ಕರೆದಿದೆ. ಇದಾದ ಒಂದು ದಿನದಲ್ಲೇ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ ಮಾಡಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್