LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆಕ್ಷೇಪಾರ್ಹ ಟ್ವೀಟ್ ಪ್ರಕರಣ: ಜೆ.ಪಿ.ನಡ್ಡಾ, ವಿಜಯೇಂದ್ರ, ಮಾಳವೀಯಗೆ ನೋಟಿಸ್ ಜಾರಿ

ಬೆಂಗಳೂರು: ಆಕ್ಷೇಪಾರ್ಹ ಟ್ವೀಟ್ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಬಿಜೆಪಿಯ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರಿಗೆ ನೋಟಿಸ್​ ಜಾರಿ ಮಾಡಲಾಗಿದೆ. ನೋಟಿಸ್ ತಲುಪಿದ 7 ದಿನಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.


ಕರ್ನಾಟಕದ ಬಿಜೆಪಿಯ ಅಧಿಕೃತ 'ಎಕ್ಸ್'​ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಲಾಗಿತ್ತು. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳ ಹೆಸರಿನ ಮೊಟ್ಟೆಗಳಿರುವ ಗೂಡಿನಲ್ಲಿ ಮುಸ್ಲಿಂ ಹೆಸರಿನ ಮೊಟ್ಟೆ ತಂದಿಟ್ಟು ಪೋಷಿಸುವಂತೆ, ಅದೇ ಮುಸ್ಲಿಂ ಹೆಸರಿನ ಮೊಟ್ಟೆಯಿಂದ ಹೊರಬಂದ ಮರಿ ಕೊನೆಗೆ ಇತರ ಹಕ್ಕಿಗಳನ್ನು ಓಡಿಸುತ್ತಿರುವಂತೆ ಸೂಚಿಸುವ ಕಾರ್ಟೂನ್ ವಿಡಿಯೋವೊಂದನ್ನು ಮೇ 4ರಂದು ಬಿಜೆಪಿ ಹಂಚಿಕೊಂಡಿತ್ತು.


ಈ ವಿವಾದಿತ ಪೋಸ್ಟ್ ವಿರುದ್ಧ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ದೂರು ನೀಡಿದ್ದರು. ಇದರನ್ವಯ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೇ, ಜೆ.ಪಿ. ನಡ್ಡಾ, ವಿಜಯೇಂದ್ರ, ಅಮಿತ್​ ಮಾಳವೀಯ ಅವರಿಗೆ ಮೇ 6ರಂದು ಪೊಲೀಸರು ನೋಟಿಸ್​ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್