LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಜ್ವಲ್ ರೇವಣ್ಣ  ಅಶ್ಲೀಲ ವಿಡಿಯೋ ಸೋರಿಕೆ ಪ್ರಕರಣ: ವಕೀಲ ದೇವರಾಜೇಗೌಡ  ಬಂಧನ

ಬೆಂಗಳೂರು, ಮೇ 11: ಪ್ರಜ್ವಲ್ ರೇವಣ್ಣ  ಅಶ್ಲೀಲ ವಿಡಿಯೋ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್  ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ  ಬಂಧನ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.

ದೇವರಾಜೇಗೌಡರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ಶುಕ್ರವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ, ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 1ರಂದೇ ಎಫ್​ಐಆರ್​​ ದಾಖಲಾಗಿತ್ತು. ಹಾಗಾದರೆ ಇಷ್ಟು ದಿನ ಪೊಲೀಸರು ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಇದೀಗ ಎದುರಾಗಿದೆ.

ಸಂತ್ರಸ್ತೆಯು ಏಪ್ರಿಲ್ 1ರಂದು ರಾತ್ರಿ 9.30ಕ್ಕೆ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ. ಸಂತ್ರಸ್ತೆಯು ಹಾಸನದ ತಣ್ಣೀರುಹಳ್ಳಿ, ನಿಲವಾಗಿಲು ರಸ್ತೆಯಲ್ಲಿರುವ 30*40 ಸೈಟ್ ಮಾರಾಟ ಮಾಡುವ ವಿಚಾರವಾಗಿ ಆರೋಪಿಯಾದ ಹೊಳೆನರಸೀಪುರ ತಾಲೋಕ್ ಕಾಮಸಮುದ್ರ ಗ್ರಾಮದ ದೇವರಾಜೇಗೌಡರವರ ಜತೆ ಈಗೆ, 10 ತಿಂಗಳ ಹಿಂದೆ ಪರಿಚಯವಾಗಿ ಅಗಾಗ ಪೋನ್ ಮಾಡುತ್ತಾ ಬಂದಿದ್ದಾರೆ. ಸಂತ್ರಸ್ತೆಯ ಪತಿ ಹೊಳೇನರಸೀಪುರದಲ್ಲಿ ಸೈಟ್ ಹೊಂದಿದ್ದಾರೆ. ಈ ಸೈಟ್​​ಗೆ ನಾನೇ ಮನೆ ಕಟ್ಟಿಸಿಕೊಡುತ್ತೇನೆ ಎಂದು ಸಂತ್ರಸ್ತೆಗೆ ಹೇಳಿದ್ದ ದೇವರಾಜೇಗೌಡರು, ಎಸಿ ಸಾಹೇಬರು ನನಗೆ ಪರಿಚಯವಿರುತ್ತಾರೆ. ನಿಮ್ಮ ಕೆಲಸ ಮಾಡಿಸಿಕೊಡುತ್ತೇನೆ. ನೀವು ಒಬ್ಬರೇ ಹಾಸನಕ್ಕೆ ಬನ್ನಿ ಎಂದು ಕರೆಸಿಕೊಂಡು ಇನೋವಾ ಕಾರಿನಲಿ ಹಾಸನದಲ್ಲಿ, ನಾಲೈದು ಕಡೆ ಸುತ್ತಾಡಿಸಿ ನಂತರ ಹಾಸನ, ಹೊಳೆನರಸೀಪುರ ರಸ್ತೆಗೆ ಹೊಂದಿಕೊಂಡಿರುವ ಬಿಯರ್ ತಯಾರಿಕ ಘಟಕದ ಹಿಂದಿರುವ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಪಿರ್ಯಾದಿಯವರ ಮೈಕೈಗೆ ಮುಟ್ಟಿ ದೈಹಿಕವಾಗಿ ಹಿಂಸೆ ನೀಡಿರುತ್ತಾರೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.

ದೇವರಾಜೇಗೌಡ ಇಷ್ಟೊಂದು ಬಲವಾದ ಆರೋಪಗಳಿದ್ದರೂ, ಏಪ್ರಿಲ್ 1ರಂದೇ ಎಫ್​ಐಆರ್​​ ದಾಖಲಾಗಿದ್ದರೂ ಮೇ 10ರ ತನಕ ಪೊಲೀಸರು ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಈಗ ಮೂಡಿದೆ. ಯಾಕೆಂದರೆ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ, ಬ್ಲ್ಯಾಕ್​ಮೇಲ್ ಮಾಡಿದ ಹಾಗೂ ಬೆದರಿಕೆ ಹಾಕಿದ ಗಂಭೀರ ಆರೋಪ ಅವರ ಮೇಲಿದೆ.

ಏಪ್ರಿಲ್​​​​ 1ರಂದು ದಾಖಲಾಕಿದ್ದ ಎಫ್​ಐಆರ್​​ನಲ್ಲಿ ಈವರೆಗೆ ಸಮಸ್ಯೆಗೆ ಸಿಲುಕದಿದ್ದ ದೇವರಾಜೇಗೌಡರಿಗೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದೇ ಮುಳುವಾಯ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಹಳೆಯ ಕೇಸ್​​​ನಲ್ಲಿ ಪೊಲೀಸರು ಅವರನ್ನು ಈಗ ಬಂಧಿಸಿರುವುದೇ ಇದಕ್ಕೆ ಕಾರಣ. ಇನ್ನೊಂದೆಡೆ ದೇವರಾಜೇಗೌಡ ಜಾಮೀನು ಅರ್ಜಿ ಸಲ್ಲಿಸಿದ ದಿನಾಂಕವನ್ನೂ ಗಮನಿಸಬೇಕು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ