LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

SSLC ಟಾಪರ್ ಅಂಕಿತಾಗೆ 5 ಲಕ್ಷ, 3ನೇ ಸ್ಥಾನ ಪಡೆದ ನವನೀತ್​ಗೆ 2 ಲಕ್ಷ ರೂ. ಉಡುಗೊರೆ ನೀಡಿದ ಡಿಸಿಎಂ

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಓದಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್​ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 3ನೇ ರಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು. ಡಿ.ಕೆ.ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್​ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ ಎಂದರು.


ಇವರ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರ್ಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್