Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ; ಪ್ರಲ್ಹಾದ ಜೋಶಿ ಸ್ಪಷ್ಟನೆ

ನವದೆಹಲಿ, 

ಜಾಗತಿಕ ಸಂಘರ್ಷ, ಬಿಕ್ಕಟ್ಟಿದ್ದರೂ ಭಾರತವು ತೈಲ ಬೆಲೆಯನ್ನು ಅತ್ಯಂತ ಕನಿಷ್ಠ ಮಟ್ಟದಲ್ಲಿ ಹೆಚ್ಚಳ ಮಾಡಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ 20 ರಿಂದ 45ರಷ್ಟು ಏರಿಕೆ ಕಂಡಿದ್ದರೆ, ನಮ್ಮ ದೇಶದಲ್ಲಿ ಕೇವಲ ಶೇ 3.2ರಷ್ಟು ಮಾತ್ರವೇ ಹೆಚ್ಚಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 3 ರೂ. ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿವೆ. ಈ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ಅಂಕಿಅಂಶ ಸಮೇತ ಸ್ಪಷ್ಟನೆ ನೀಡಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಇಂಧನ ಪೂರೈಕೆ ಅಡ್ಡಿ ಆತಂಕದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ನಾಗರಿಕರ ಹಿತದೃಷ್ಟಿಯಿಂದ ಕೆಲವೇ ದಿನಗಳ ಹಿಂದೆ ಅಬಕಾರಿ ಸುಂಕವನ್ನು 10 ರೂ. ಕಡಿಮೆ ಮಾಡಿತ್ತು. ಆದರೆ, ಇದೀಗ ಬ್ರೆಂಟ್ ಕಚ್ಚಾ ತೈಲ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಏರುತ್ತಿದ್ದರಿಂದ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಅನಿವಾರ್ಯವಾಗಿದೆ. ಆದರೂ ವಿಶ್ವದಲ್ಲೇ ಅತ್ಯಂತ ಕನಿಷ್ಠ ಮಟ್ಟದಲ್ಲಿ ಅಂದರೆ 3 ರೂ. ಏರಿಕೆ ಮಾಡಿದೆ ಎಂದು ಜೋಶಿ ಹೇಳಿದ್ದಾರೆ.

Advertisement

ಜಾಗತಿಕವಾಗಿ ನೋಡಿದರೆ ತೈಲ ಬೆಲೆಯನ್ನು ಭಾರತವೇ ಆತ್ಯಂತ ಕಡಿಮೆ‌‌ ಮಟ್ಟದಲ್ಲಿ ಏರಿಕೆ ಮಾಡಿದೆ. ಯುಎಸ್ಎ +44.5%, ಶ್ರೀಲಂಕಾ +38.2%, ಯುಕೆ +19.2%, ಜರ್ಮನಿ +13.7% ರಷ್ಟು ಹೆಚ್ಚಳ ಮಾಡಿದ್ದರೆ, ತಮ್ಮ ಸರ್ಕಾರ ಭಾರತದಲ್ಲಿ‌ ಕೇವಲ +3.2% ಹೆಚ್ಚಳ ಮಾಡಿದೆ ಅಷ್ಟೇ ಎಂದು ಸಚಿವರು ಅಂಕಿ ಅಂಶ ಸಹಿತ ವಿವರಿಸಿ ಕಾಂಗ್ರೆಸ್ ಗೆ ಚಾಟಿ ಬೀಸಿದ್ದಾರೆ.

ಜಗತ್ತಿನೆಲ್ಲೆಡೆ ಎಲ್ಲಾ ರಾಷ್ಟ್ರಗಳು ಇಂಧನ ಬಿಕ್ಕಟ್ಟು ಎದುರಿಸುತ್ತಿವೆ. ಇಂಧನ ಪೂರೈಕೆ ಮತ್ತು ತೈಲ ಆಮದು ಮಾಡಿಕೊಳ್ಳುವ ದೇಶಗಳಂತೂ ತೀವ್ರ ಒತ್ತಡದಲ್ಲಿವೆ. ವಾಸ್ತವ ಗೊತ್ತಿದ್ದರೂ ಈ ವಿಷಯದಲ್ಲಿ ಕಾಂಗ್ರೆಸ್ ಬೂಟಾಟಿಕೆ ಮಾಡುತ್ತಿದೆ ಎಂದು ಸಚಿವರು ಕಿಡಿ ಕಾರಿದ್ದಾರೆ.

ಜಾಗತಿಕ ತೈಲ ಪೂರೈಕೆಯಲ್ಲಿ ಯಾವುದೇ ಅಡಚಣೆ ಇಲ್ಲದಿದ್ದರೂ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರ ಎರೆಡೆರಡು ಬಾರಿ ಇಂಧನ ತೆರಿಗೆ ಹೆಚ್ಚಿಸಿದ್ದೇಕೆ ಎಂದು ಜೋಶಿ ಪ್ರಶ್ನಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಸೆಸ್ ಹೆಚ್ಚಿಸಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ

ಕರ್ನಾಟಕ ಕಾಂಗ್ರೆಸ್ ಸರ್ಕಾರ 2024ರ ಜೂನ್ 15ಕ್ಕೆ ಪೆಟ್ರೋಲ್ ವ್ಯಾಟ್ ಅನ್ನು ಶೇ 25.92ರಿಂದ ಶೇ.29.84 ಮತ್ತು ಡೀಸೆಲ್ ಮೇಲೆ ಶೇ 14.34 ರಿಂದ ಶೇ 18.44ರಷ್ಟು ಹಾಗೂ 3 ರೂ. ಪ್ರತಿ ಲೀಟರ್ ಗೆ ಹೆಚ್ಚಿಸಿತ್ತು. 2025ರ ಏಪ್ರಿಲ್ 1ಕ್ಕೆ ಡೀಸೆಲ್ ವ್ಯಾಟ್ ಮತ್ತೆ ಶೇ.21.17ಕ್ಕೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಸುಮಾರು 91 ರೂ. ಏರಿಸಿದ್ದು, ಕೇವಲ 10 ತಿಂಗಳಲ್ಲಿ 5 ರೂ. ಹೆಚ್ಚಿಸಿದೆ. ಇದೇಕೆ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಬೂಟಾಟಿಕೆ: ಜೋಶಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನಜೀವನ ದುಸ್ಥರಗೊಳಿಸಿದೆ. ಆದರೆ, ಈಗ ಕೇಂದ್ರದತ್ತ ಬೆರಳು ತೋರಿ ಪಾಠ ಮಾಡಲು ಬರುತ್ತಿದೆ. ಇದು ಬೂಟಾಟಿಕೆ ರಾಜಕಾರಣವಲ್ಲದೆ ಮತ್ತೇನೂ ಅಲ್ಲವೆಂದು ವಾಗ್ದಾಳಿ ಮಾಡಿದ್ದಾರೆ.

ಪ್ರಸ್ತುತ ಸನ್ನಿವೇಶದಲ್ಲಿ ತೈಲ ಬೆಲೆ ಏರಿಕೆಯನ್ನು ದೇಶದ ಜನ ಅರ್ಥ ಮಾಡಿಕೊಳ್ಳಬಲ್ಲರು. ಅದರಂತೆ ರಾಜ್ಯ ಸರ್ಕಾರ ಸಹ ಕೇಂದ್ರದ ಅನಿವಾರ್ಯ ನಿಲುವುಗಳನ್ನು ಗೌರವಿಸಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*