LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಈರುಳ್ಳಿ ಬೆಲೆ ದಿಢೀರ್ ಇಳಿಕೆ; ಕ್ವಿಂಟಾಲ್​ಗೆ 2000 ರೂ.ಗೆ ಕುಸಿತ; ರೈತರು ಕಂಗಾಲು

ಬೆಂಗಳೂರು, ಅಕ್ಟೋಬರ್ 30: ರೈತ ಬೆವರು ಸುರಿಸಿ ದುಡಿದ ಈರುಳ್ಳಿ ಬೆಳೆ ಏಕಾಏಕಿ ಸುರಿದ ಮಳೆಯಿಂದ ಸಂಪೂರ್ಣ ಹಾಳಾಗಿದೆ. ಈ ವರ್ಷ ಆರಂಭದಲ್ಲಿ ಮಳೆಯ ಸಮಸ್ಯೆ ಏನೂ ಆಗಿರಲಿಲ್ಲ. ಫಸಲು ಚೆನ್ನಾಗಿಯೇ ಬಂದಿತ್ತು. ಹೀಗಾಗಿ ಇನ್ನೇನು ನೆಮ್ಮದಿಯಾಗಿರಬಹುದು ಎಂದುಕೊಂಡಿದ್ದ ರೈತನೆದೆಗೆ ಬರಸಿಡಿಲಿನಂತೆ ಅಪ್ಪಳಿಸಿದ್ದು ಇದೇ ಮಳೆ. ಏಕಾಏಕಿ ಬಿಟ್ಟೂ ಬಿಡದಂತೆ ಸುರಿದ ಮಳೆ ರಾಜ್ಯಾದ್ಯಂತ ಆತಂಕವನ್ನೇ ಸೃಷ್ಟಿಸಿತ್ತು. ಇದರ ಪರಿಣಾಮದಿಂದ ಚಿತ್ರದುರ್ಗ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳ ಸಾವಿರಾರು ಹೆಕ್ಟೇರ್​ ಪ್ರದೇಶಗಳಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ಸರ್ವನಾಶವಾಗಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಮಳೆಗೆ ಕೆರೆ ಕಟ್ಟೆಗಳು ತುಂಬಿ ಹರಿದು, ಜಿಲ್ಲೆಯ ಹಲವು ಕಡೆಗಳಲ್ಲಿ ಜಮೀನುಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಇದರಿಂದಾಗಿ ಅಪಾರ ಪ್ರಮಾಣದ ಈರುಳ್ಳಿ ಬೆಳೆ ಸರ್ವನಾಶವಾಗಿತ್ತು. ಸಚಿವ ಕೃಷ್ಣ ಬೈರೇಗೌಡ ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈರುಳ್ಳಿ ಬೆಳೆ ಬೆಳೆಯಲು ಎಕರೆಗೆ 80 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಖರ್ಚಾಗುತ್ತದೆ. ಸಾಲಶೂಲ ಮಾಡಿ ಈರುಳ್ಳಿ ಬೆಳೆದು ಈಗ ಲಕ್ಷ ಲಕ್ಷ ನಷ್ಟ ಅನುಭವಿಸುವಂತಾಗಿದೆ ಎಂದು ರೈತ ಶ್ರೀಧರ್ ರೆಡ್ಡಿ ಅಳಲು ತೋಡಿಕೊಂಡಿದ್ದಾರೆ.

ಗದಗ ಜಿಲ್ಲೆಯಲ್ಲಿ ಈ ಬಾರಿ 14 ಸಾವಿರಕ್ಕೂ ಅಧಿಕ ಪ್ರದೇಶಗಳಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿತ್ತು. ಆದರೆ ವರುಣನ ಆರ್ಭಟಕ್ಕೆ ಸುಮಾರು 4 ಸಾವಿರ ಹೆಕ್ಟೇರ್ ಪ್ರದೇಶದ ಈರುಳ್ಳಿ ಬೆಳೆ ಸಂಪೂರ್ಣ ಸರ್ವನಾಶವಾಗಿದೆ. ಒಂದೆಡೆ, ಬೆಳೆ ಹಾನಿಯಾದರೆ ಮತ್ತೊಂದೆಡೆ ದಿಢೀರ್​ ಬೆಲೆ ಕುಸಿತ ರೈತರನ್ನು ಜರ್ಜರಿತರನ್ನಾಗಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್