LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಇದು ಟ್ರೇಲರ್ ಅಷ್ಟೇ: ರಕ್ಷಣಾ ಸಚಿವ ರಾಜನಾಥ್ ಸಿಂಗ್


ನವದೆಹಲಿ: ನಾವು ಪಾಕಿಸ್ತಾನಕ್ಕೆ ಸಮಯ ನೀಡಿದ್ದೇವೆ. ಅವರ ನಡವಳಿಕೆ ಸುಧಾರಿಸಿದರೆ ಸರಿ, ಇಲ್ಲದಿದ್ದರೆ, ಅದಕ್ಕೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಸದ್ಯ ಏನೇ ನಡೆದರೂ ಅದು ಕೇವಲ ಟ್ರೇಲರ್ ಮಾತ್ರ. ಸರಿಯಾದ ಸಮಯ ಬಂದಾಗ, ನಾವು ಪೂರ್ತಿ ಸಿನಿಮಾವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ರಕ್ಷಣಾ ಸಚಿವರು ಎಚ್ಚರಿಕೆ ನೀಡಿದ್ದಾರೆ.


ಆಪರೇಷನ್ ಸಿಂಧೂರ ವೇಳೆ ಭಾರತೀಯ ವಾಯುಪಡೆ ಮತ್ತು ಸಶಸ್ತ್ರ ಪಡೆಗಳ ಅಸಾಧಾರಣ ಪ್ರದರ್ಶನವನ್ನು ಶ್ಲಾಘಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇದು ಭಾರತದ ಮಿಲಿಟರಿ ಶಕ್ತಿ ಮತ್ತು ಸನ್ನದ್ಧತೆಗೆ ಒಂದು ಅದ್ಭುತ ನಿದರ್ಶನವಾಗಿದೆ ಎಂದರು.


 ಶುಕ್ರವಾರ ಗುಜರಾತ್‌ನ ಭುಜ್ ವಾಯು ನೆಲೆಗೆ ಭೇಟಿ ನೀಡಿ, "ವಾಯುಪಡೆಯ ವೀರ ಯೋಧರ" ಜೊತೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ರಕ್ಷಣಾ ಸಚಿವರು, "ನಮ್ಮ ವಾಯುಪಡೆಯು ತನ್ನ ರ್ಯ, ಧೈರ್ಯ ಮತ್ತು ವೈಭವದಿಂದ ಹೊಸ ಎತ್ತರ ತಲುಪಿದೆ. ಭಯೋತ್ಪಾದನೆಯ ವಿರುದ್ಧದ ಆಪರೇಷನ್ ಸಿಂಧೂರ ಅಭಿಯಾನವನ್ನು ವಾಯುಪಡೆ ಪರಿಣಾಮಕಾರಿಯಾಗಿ ಮುನ್ನಡೆಸಿದೆ" ಎಂದು ಹೊಗಳಿದರು.


ಆಪರೇಷನ್ ಸಿಂಧೂರದಲ್ಲಿ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸುವುದಷ್ಟೇ ಅಲ್ಲ, ನಾಶ ಮಾಡುವುದರಲ್ಲೂ ಭಾರತೀಯ ಸಶಸ್ತ್ರ ಪಡೆಗಳು ಯಶಸ್ವಿಯಾಗಿವೆ. ಪಾಕ್​​ನ ಹಲವು ವಾಯು ನೆಲೆಗಳು ನಾಶವಾಗಿವೆ. ಪಾಕಿಸ್ತಾನದಲ್ಲಿನ 9 ಉಗ್ರರ ನೆಲೆಗಳನ್ನು ಭಾರತ ಧ್ವಂಸಗೊಳಿಸಿದ್ದನ್ನು ಇಡೀ ವಿಶ್ವವೇ ನೋಡಿದೆ. ಈ ಮೂಲಕ ನವ ಭಾರತದ ಸಂದೇಶವನ್ನು ಜಗತ್ತಿಗೆ ರವಾನಿಸಿದ್ದೀರಿ ಎಂದು ಸೇನಾ ಸಿಬ್ಬಂದಿಯನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡಿದರು.


ಪಾಕಿಸ್ತಾನಕ್ಕೆ ಐಎಂಎಫ್ ಹಣಕಾಸು ನೆರವು ನೀಡುವುದನ್ನು ಮರು ಪರಿಶೀಲಿಸಬೇಕು. ಸದ್ಯದ ಮಟ್ಟಿಗೆ ಪಾಕಿಸ್ತಾನಕ್ಕೆ ನೀಡುವ ಹಣಕಾಸು ಸೇರಿ ಯಾವುದೇ ನೆರವು ಕೂಡ ಭಯೋತ್ಪಾದನೆಗೆ ನೀಡಿದಂತಾಗಲಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ