LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಮಠಗಳ ಮತ್ತು ಸಂತರಿಂದ ನಮ್ಮ ಹಿಂದೂ ಧರ್ಮ, ಸಂಸ್ಕೃತಿ ಇನ್ನುವರೆಗೂ ಉಳಿದುಕೊಂಡಿದೆ"

ರಾಯಬಾಗ: ಮಠಗಳ ಮತ್ತು ಸಂತರಿಂದ ನಮ್ಮ ಹಿಂದೂ ಧರ್ಮ, ಸಂಸ್ಕೃತಿ ಇನ್ನುವರೆಗೂ ಉಳಿದುಕೊಂಡಿದೆ ಎಂದು ಹಂಚಿನಾಳ ಭಕ್ತಿಯೋಗಾಶ್ರಮದ ಮಹೇಶಾನಂದ ಸ್ವಾಮಿಜೀ ಹೇಳಿದರು.
ಭಾನುವಾರ ರಾತ್ರಿ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ 39ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಜ್ಞಾನ ಜೊತೆಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ನೀಡಿ, ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ, ದೇಶ ಪ್ರೇಮವನ್ನು ಬೆಳೆಸಬೇಕು ಎಂದರು.


ವಾಗ್ಮಿ ಬೆಂಗಳೂರಿನ ಹಾರಿಕಾ ಮಂಜುನಾಥ ಮಾತನಾಡಿ, ಭಾರತೀಯರಾದ ನಾವೆಲ್ಲರೂ ಹಿಂದೂ, ನಾವೆಲ್ಲ ಒಂದು ಎಂಬ ಭಾವನೆ ನಮ್ಮಲ್ಲಿ ಮೂಡಿದಾಗ ಮಾತ್ರ ಸನಾತನ ಹಿಂದೂ ಧರ್ಮ ಉಳಿಯಲು ಸಾಧ್ಯ. ನಮ್ಮ ಮಕ್ಕಳಲ್ಲಿ ನಮ್ಮ ಧರ್ಮ, ಪರಂಪರೆ, ಇತಿಹಾಸದ ಬಗ್ಗೆ ಜಾಗೃತ ಮೂಡಿಸಬೇಕಾಗಿದೆ ಎಂದರು.


ಚಿಕ್ಕೋಡಿ ಸಂಪಾದನಾ ಚರಮೂರ್ತಿಮಠದ ಸಂಪಾದನಾ ಸ್ವಾಮೀಜಿ, ಅಥಣಿ ಕಾಡಸಿದ್ಧೇಶ್ವರ ಮಠದ ಡಾ.ಕಾಡಯ್ಯ ಸ್ವಾಮೀಜಿ ಮಾತನಾಡಿದರು.


ಪಂಚಲಿಂಗೇಶ್ವರ ಮಠದ ವೀರಭದ್ರೇಶ್ವರ ಸ್ವಾಮಿಜೀಯವರು ಸಾನಿಧ್ಯ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಜೈನಾಪುರದ ಸಿದ್ದಲಿಂಗ ಸ್ವಾಮಿಜೀ, ವಿಜಯಪುರದ  ಶಂಕರ ಸ್ವಾಮಿಜೀ, ನರಸಿಂಹರಾಜ ಸ್ವಾಮೀಜಿ, ವಿಶ್ವ ಹಿಂದೂ ಪರಿಷತ್ ಪ್ರಾಂತ ಗೋರಕ್ಷಾ ಪ್ರಮುಖ ವಿಠ್ಠಲಜಿ ಮಾಳಿ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ರಘು ಮಾಳಿ, ಅಮಿತ ಜಾಧವ, ಸಂಗಣ್ಣ ದತ್ತವಾಡೆ, ಕೇದಾರಿ ಮಾಳಿ ಹಾಗೂ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್