LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

ಬೆಂಗಳೂರು, (ಸೆಪ್ಟೆಂಬರ್ 24): ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ.  ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. ಮೈಸೂರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು ಪ್ರಧಾನಿ ಮೋದಿ ಅವರನ್ನು ಬೆಂಬಲಿಸುತ್ತಿದ್ದರು. ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್