LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ವೈಮಾನಿಕ ದಾಳಿಯಲ್ಲಿ ಪಾಲೆಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ ನಾಯಕ ಸಾವು

ಇಸ್ರೇಲ್​18: ಪಾಲೆಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ ನಾಯಕನನ್ನು ವೈಮಾನಿಕ ದಾಳಿಯಲ್ಲಿ ಕೊಲ್ಲಲಾಗಿದೆ ಎಂದು ಇಸ್ರೇಲ್​ ರಕ್ಷಣಾ ಪಡೆ ಹೇಳಿಕೆಯಲ್ಲಿ ತಿಳಿಸಿದೆ.


ಪಾಲೇಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ನ ಜೆನಿನ್ ಬ್ರಿಗೇಡ್‌ನ ಕಮಾಂಡರ್ ಅಸ್ಲಾಂ ಹಮೈಸಾ ಎಂದು ಪತ್ತೆ ಮಾಡಲಾಗಿದೆ. ಶಿನ್ ಬೆಟ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಅವರು ಇಸ್ಲಾಮಿಕ್ ಜಿಹಾದ್ ನಾಯಕ, ಕಟ್ಟಡದಲ್ಲಿ ಅವಿತು ಕುಳಿತಿದ್ದಾಗ ಆತನ ಮೇಲೆ ದಾಳಿ ನಡೆಸಲಾಗಿದೆ ಎಂದು ಐಡಿಎಫ್​ ತಿಳಿಸಿದೆ.


ವೆಸ್ಟ್ ಬ್ಯಾಂಕ್‌ನ ಹರ್ಮೆಶ್ ವಸಾಹತು ಪ್ರದೇಶದಲ್ಲಿ ಯಹೂದಿಗಳ ಹತ್ಯೆಯ ದಾಳಿಯ ಪ್ರಮುಖ ಕಾರಣ ಪಾಲೆಸ್ತೇನಿಯನ್ ಇಸ್ಲಾಮಿಕ್ ಜಿಹಾದ್ ನಾಯಕನಾಗಿದ್ದ ಎಂದು ಐಡಿಎಫ್​ ಮಾಹಿತಿ ನೀಡಿದೆ.


ಅಸ್ಲಾಂ ಹಮೈಸಾ ಹತ್ಯೆಯನ್ನು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಶುಕ್ರವಾರ ರಾತ್ರಿ ಜೆನಿನ್‌ನಲ್ಲಿರುವ ಕಟ್ಟಡವೊಂದರ ಮೇಲೆ ಇಸ್ರೇಲ್ ವಾಯುಪಡೆ ನಡೆಸಿದ ದಾಳಿಯಲ್ಲಿ ಅಸ್ಲಾಂ ಹಮೈಸಾ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.


ಈ ಕುರಿತು ಇಸ್ರೇಲ್​ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮಾತನಾಡಿ, ನಮ್ಮ ದೇಶವು ಲೆಬನಾನಿನ ಸಶಸ್ತ್ರ ಗುಂಪು ಹೆಜ್ಬೊಲ್ಲಾ ಜೊತೆ ಕಠಿಣ ಯುದ್ಧವನ್ನು ನಡೆಸದಂತೆ ಇರಲು ಆದ್ಯತೆ ನೀಡಿರುವುದಾಗಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್