LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭ!

ನವದೆಹಲಿ: ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್​ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡಿಸಲಿದ್ದು, ಇದು ಅವರ ಏಂಟನೇ ಬಜೆಟ್​ ಮಂಡನೆಯಾಗಿದೆ.


ಬಜೆಟ್​ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್​ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣೆ ಮಾಡಲಿದ್ದು, ಆರ್ಥಿಕ ಸಮೀಕ್ಷೆ ಮಂಡನೆ ಕೂಡ ಆಗಲಿದೆ.


ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೀಯ ಸಚಿವ ಕಿರಣ್​ ರಿಜುಜ್​​, ಗೌರವಾನ್ವಿತ ರಾಷ್ಟ್ರಪತಿಗಳು 2025ರ ಜನವರಿ 31ರಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 2025-26ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ಫೆ 1ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.


ಬಜೆಟ್​​ ಅಧಿವೇಶನದ ಮೊದಲ ಭಾಗ ಜನವರಿ 31ರಿಂದ ಫೆಬ್ರವರಿ 13ರವರೆಗೆ 9ದಿನಗಳ ಕಾಲ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಲಿದ್ದು, ಸೀತಾರಾಮನ್​ ಅವರು ಬಜೆಟ್​ ಚರ್ಚೆಗೆ ಉತ್ತರಿಸಲಿದ್ದಾರೆ.


ಬಜೆಟ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ಸಂಸತ್​​ ವಿರಾಮ ಪಡೆಯಲಿದ್ದು, ಮತ್ತೆ ಮಾರ್ಚ್​ 10ರಿಂದ ಆರಂಭವಾಗಲಿದ್ದು, ಈ ವೇಳೆ ಬಜೆಟ್​​ ಪ್ರಸ್ತಾವನೆಗಳ ಪೂರ್ಣಗೊಳಿಸುವುವಿಕೆ ಹಾಗೂ ನಿಧಿ ಹಂಚಿಕೆ ಬೇಡಿಕೆ ವಿಚಾರದಲ್ಲಿ ಚರ್ಚೆಗಳು ಸಾಗಲಿದೆ. ಈ ಅಧಿವೇಶನ ಏಪ್ರಿಲ್​ 4ರಂದು ಪೂರ್ಣಗೊಳ್ಳಲಿದ್ದು, ಒಟ್ಟು 27 ದಿನ ಸಾಗಲಿದೆ. (ಪಿಟಿಐ)

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್