LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

 ಶೇ. 72.23 ಮತದಾರರಿಗೆ ಗಣತಿ ನಮೂನೆಗಳ ವಿತರಣೆ



ಧಾರವಾಡ,08 : ಚುನಾವಣಾ ಆಯೋಗದ ಸೂಚನೆ ಮೆರೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ, ಧಾರವಾಡ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ಜೂನ್ 30, 2026 ರಿಂದ ಜುಲೈ 29, 2026 ರವರೆಗೆ ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿ, ಏಣಿಕೆ, ಗಣತಿ ನಮೂನೆಗಳನ್ನು (Enumeration Forms) ವಿತರಣೆ ಮಾಡಲಾಗುತ್ತಿದ್ದು, ಧಾರವಾಡ ಜಿಲ್ಲೆಯ ಮತಗಟ್ಟೆ ಮಟ್ಟದ ಅಧಿಕಾರಿಗಳು ಜುಲೈ 07, 2026 ವರೆಗೆ ಶೇ. 72.23 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಣೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.

69-ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಶೇ. 97.70 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 4.18 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 70-ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಶೇ. 80.70 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 1.06 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 71-ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 77.98 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 4.48 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 72-ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಶೇ. 65.98 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ.0.71 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ.

73-ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಶೇ.52.90 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 0.80 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 74-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಶೇ.54.51 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 1.27 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 75-ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 87.83 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ.3.50 ಭರ್ತಿ ಮಾಡಿದ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ.

ಒಟ್ಟು 7 ವಿಧಾನ ಸಭಾ ಕ್ಷೇತ್ರದಲ್ಲಿ ಶೇ. 72.23 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ.2.20 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ. 
ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿದ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು, ಮತದಾರರು ತಮ್ಮ ಅವಶ್ಯಕ ಮಾಹಿತಿಗಳನ್ನು ಭರಣಾ ಮಾಡಿದ ಏಣಿಕೆ, ಗಣತಿ ನಮೂನೆಗಳನ್ನು (Enumeration Forms) BLOರವರಿಗೆ ನೀಡಿ ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್