LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಷನ್ ಕ್ರಿಕೆಟ್ ಟೂರ್ನಿ: ಬ್ಲೂ ರೈಡೆರ್ಸ್ ಚಾಂಪಿಯನ್

ಬಳ್ಳಾರಿ, ಜೂ.19:: ಬಳ್ಳಾರಿ ಜಿಲ್ಲಾ ಮತ್ತು ತಾಲೂಕು ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ 11ನೇ ಸೀಸನ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬ್ಲೂ ರೈಡೆರ್ಸ್ ತಂಡವು ಸಿರುಗುಪ್ಪ Xl ತಂಡವನ್ನು 24 ರನ್‌ಗಳ ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
ನಗರದ ವೀರಶೈವ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಈ ಪಂದ್ಯಾವಳಿಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬ್ಲೂ ರೈಡೆರ್ಸ್ ತಂಡ ನಿಗದಿತ 10 ಓವರ್‌ಗಳಲ್ಲಿ 76 ರನ್‌ಗಳನ್ನು ಕಲೆಹಾಕಿತು.
ಗೆಲುವಿನ ಗುರಿ ಬೆನ್ನತ್ತಿದ ಸಿರುಗುಪ್ಪ XL ತಂಡವು ಬ್ಲೂ ರೈಡೆರ್ಸ್ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿ 10 ಓವರ್‌ಗಳಲ್ಲಿ 52 ರನ್‌ಗಳಿಗೆ ಸೀಮಿತವಾಯಿತು. ಇದರೊಂದಿಗೆ ಬ್ಲೂ ರೈಡೆರ್ಸ್ ತಂಡವು 24 ರನ್‌ಗಳ ಭರ್ಜರಿ ಜಯ ಸಾಧಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.
ಪಂದ್ಯಾವಳಿಯ ವಿಜೇತ ತಂಡಕ್ಕೆ ₹30,000 ನಗದು ಬಹುಮಾನ ಹಾಗೂ ಟ್ರೋಫಿ, ರನ್ನರ್-ಅಪ್ ಸಿರುಗುಪ್ಪ XL ತಂಡಕ್ಕೆ ₹20,000 ನಗದು ಬಹುಮಾನ ಹಾಗೂ ಟ್ರೋಫಿ ಪ್ರದಾನ ಮಾಡಲಾಯಿತು.
ವೈಯಕ್ತಿಕ ಪ್ರಶಸ್ತಿಗಳ ವಿಭಾಗದಲ್ಲಿ ರಾಜ್ ಪಂದ್ಯಶ್ರೇಷ್ಠ (Man of the Match), ಜೀಲನ್ ಅತ್ಯುತ್ತಮ ಬೌಲರ್, ಖಾಜಾ ಅತ್ಯುತ್ತಮ ಬ್ಯಾಟ್ಸ್‌ಮನ್ ಹಾಗೂ ಪಂಪಯ್ಯ ಸ್ವಾಮಿ ಸರಣಿಶ್ರೇಷ್ಠ (Man of the Series).
 ಅತ್ಯುತ್ತಮ ಫೀಲ್ಡಿಂಗ್  ದೂದ್   ಪ್ರಶಸ್ತಿಗಳನ್ನು ಪಡೆದರು. ಸಮಾರೋಪ ಸಮಾರಂಭದಲ್ಲಿ ಅಸೋಸಿಯೇಷನ್ ಪದಾಧಿಕಾರಿಗಳು, ಸದಸ್ಯರು, ಕ್ರೀಡಾಭಿಮಾನಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ವಿಜೇತ ಮತ್ತು ರನ್ನರ್-ಅಪ್ ತಂಡಗಳಿಗೆ ಅಭಿನಂದನೆ ಸಲ್ಲಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್