LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನ 103 ಬಸ್​ ನಿಲ್ದಾಣಗಳ ಸ್ಥಳಾಂತರಕ್ಕೆ ಪ್ಲಾನ್

ಬೆಂಗಳೂರು,ಅಕ್ಟೋಬರ್ 21: ಬೆಂಗಳೂರಿನ ಯಾವುದೇ ದಿಕ್ಕಿಗೆ ಹೋದರೂ ಟ್ರಾಫಿಕ್ ​​ ಕಿರಿಕಿರಿ ಸರ್ವೆಸಾಮಾನ್ಯವಾಗಿದೆ.ಇದಕ್ಕೆ ಹಲವು ಕಾರಣಗಳಿದ್ದು, ಟ್ರಾಫಿಕ್​ ಸಿಗ್ನಲ್​ಗಳ ಬಳಿ ಬಸ್​ ನಿಲ್ದಾಣಗಳಿರುವುದೂ ಪ್ರಮುಖ ಕಾರಣವಾಗಿದೆ. ಹೀಗಾಗಿ ನಗರದ ಎಲ್ಲೆಲ್ಲಿ ಅವೈಜ್ಞಾನಿಕವಾಗಿ, ಅಸಮರ್ಪಕ ಬಸ್​ ನಿಲ್ದಾಣಗಳಿವೆಯೋ ಅವುಗಳನ್ನು ಸ್ಥಳಾಂತರ ಮಾಡಲು ಟ್ರಾಫಿಕ್​ ಪೊಲೀಸರು ಹಾಗೂ ಬಿಎಂಟಿಸಿ ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧ ಮಾಡಿದೆ.



ಬೆಂಗಳೂರಿನಲ್ಲಿ ಓಡಾಟ ಮಾಡುವ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಟ್ರಾಫಿಕ್​ ದಟ್ಟಣೆ ಕೂಡ ಗಮನಾರ್ಹವಾಗಿ ಹೆಚ್ಚಾಗಿದೆ. ಹದಗೆಟ್ಟಿರುವ ರಸ್ತೆಗಳು, ರಸ್ತೆ ಗುಂಡಿಗಳು, ಅಡ್ಡಾದಿಡ್ಡಿ ಪಾರ್ಕಿಂಗ್​ ಜೊತೆಗೆ ಟ್ರಾಫಿಕ್​ ಸಿಗ್ನಲ್​ಗಳ ಬಳಿಯೇ ಬಸ್​ ನಿಲ್ದಾಣಗಳಿರುವುದೂ ಕೂಡ ಟ್ರಾಫಿಕ್​ ಜಾಮ್​​ ಹೆಚ್ಚಾಗಲು ಕಾರಣವಾಗಿದೆ. ಹೀಗಾಗಿಯೇ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿರುವ ಬೆಂಗಳೂರು ಸಂಚಾರ ಪೊಲೀಸರು, ಬಿಎಂಟಿಸಿ ಅಧಿಕಾರಿಗಳ ಜೊತೆ ಜಂಟಿ ಸಮೀಕ್ಷೆ ನಡೆಸಿ ಸ್ಥಳಾಂತರ ಮಾಡಬೇಕಾದ 103 ಬಸ್​ ನಿಲ್ದಾಣಗಳ ಪಟ್ಟಿ ಮಾಡಿದ್ದಾರೆ.

ಸಾಮಾನ್ಯವಾಗಿ ಹೆಚ್ಚಿನ ದಟ್ಟಣೆಯ ಸಾಕ್ಷಿಯಾಗುವ ಸಿಗ್ನಲ್​ಗಳಿಗೆ ಸಮೀಪವಿರುವ 103 ಬಸ್​ ನಿಲ್ದಾಣಗಳನ್ನ ಕನಿಷ್ಠ 50 ಮೀಟರ್​​ಗಳಿಂದ 300 ಮೀಟರ್​ಗಳವರೆಗೂ ಸ್ಥಳಾಂತರ ಮಾಡುವ ಅನಿವಾರ್ಯತೆ ಇದೆ ಎಂದು ಬೆಂಗಳೂರು ಸಂಚಾರ ಪೊಲೀಸರು, ಬಿಎಂಟಿಸಿ ಸಮೀಕ್ಷೆಯಲ್ಲಿ ಮನಗಂಡಿದ್ದಾರೆ. ಹೀಗಾಗಿ ಸ್ಥಳಾಂತರ ಮಾಡಿ ಎಂದು ಗ್ರೇಟರ್​ ಬೆಂಗಳೂರು ಪ್ರಾಧಿಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ, ಎಂ.ಜಿ ರಸ್ತೆ, ಯಲಹಂಕ ಆರ್​ಎಂಜೆಡ್​​, ಈಸ್ಟ್​ ಎಂಡ್​ ಜಂಕ್ಷನ್​, ಐಟಿಪಿಎಲ್​ ಆರ್​ಎಕ್ಸ್​ಡಿಕ್ಸ್​ ಆಸ್ಪತ್ರೆ, ಹೋಫ್​ಫಾರ್ಮ್​​​​ ಜಂಕ್ಷನ್​ ಸೇರಿ 103 ಸ್ಥಳಗಳಲ್ಲಿ ಟ್ರಾಫಿಕ್​ ದಟ್ಟಣೆ ಇಳಿಸುವ ಉದ್ದೇಶವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್