LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಫೈರೋಜ್ ಪಠಾಣ್ ಕೊಲೆ ಪ್ರಕರಣ 9 ಜನರನ್ನು ವಶಕ್ಕೆ ಪಡೆದ ಪೋಲಿಸರು.

ಧಾರವಾಡ: ಮೊನ್ನೆಯಷ್ಟೇ ಧಾರವಾಡದ ಹಾಶ್ಮಿನಗರದಲ್ಲಿ ನಡೆದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಗೊತ್ತಾಗಿದೆ.

ಫೈರೋಜ್ ಪಠಾಣ್ ಕೊಲೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೊತ್ತಿಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ಅವರನ್ನು ನ್ಯಾಯಾಲಯದ ಹಾಜರುಪಡಿಸಿದ್ದರು. ಸದ್ಯ ಒಂಬತ್ತೂ ಜನರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕೊಲೆಗೆ ಬಳಸಿದ ಎರಡು ಬೈಕ್ ಹಾಗೂ ಒಂದು ಕಾರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕೊಲೆಗೆ ಸಂಬಂಧಿಸಿದಂತೆ ಮೊಹ್ಮದ್ ಷಾ, ಸೈಯದ್‌ಗೌಸ್ ಜಾನಿಷಾ, ಫರವೇಜ್ ಆಲಂ ಮಹಲ್ದಾರ, ಸಮೀರ್ ಅಹ್ಮದ್ ಮಕಾಂದಾರ್, ಸದ್ದಾಂಹುಸೇನ್ ನವಲಗುಂದ, ಖೈಫ್ ರೆಹಮಾನ್‌ಬಾಯಿ, ಅರಬಾಜ್ ಹಂಚಿನಾಳ, ಸೋಹಿಲ್‌ಖಾನ್ ಹಾಲಭಾವಿ ಹಾಗೂ ಮಕ್ತುಂ ಸೊಗಲದ ಎಂಬುವವರನ್ನು ಬಂಧಿಸಲಾಗಿದೆ. ಇದರಲ್ಲಿ ಮೊಹ್ಮದ್ ಷಾ ಹಾಗೂ ಕೊಲೆಗೀಡಾದ ಫೈರೋಜ್ ಪಠಾಣ್ ಮಧ್ಯೆ ವೈಯಕ್ತಿಕ ಸಂಘರ್ಷ ನಡೆದಿತ್ತು. ಕೊಲೆಗೀಡಾದ ಫೈರೋಜ್, ತಮಗೆ ಸಾಕಷ್ಟು ಕಿರಿಕಿರಿ ಮಾಡುತ್ತಿದ್ದ. ರಿಯಲ್ ಎಸ್ಟೇಟ್ ವಿಷಯದಲ್ಲೂ ಸಾಕಷ್ಟು ಕಿರಿಕಿರಿ ಮಾಡುತ್ತಿದ್ದ. ಹಲವು ಬಾರಿ ವೈಯಕ್ತಿಕ ಜಗಳ ನಡೆದು ಪೊಲೀಸ್ ಠಾಣೆ ಮೆಟ್ಟಿಲು ಸಹ ಏರಿದ್ದವು. ಇದೇ ವಿಷಯ ಕೊಲೆಗೆ ಕಾರಣ ಎಂಬುದನ್ನು ಮೊಹ್ಮದ್ ಷಾ ಹೇಳಿದ್ದಾನೆ.

ಈ ಕುರಿತು ನಾವು ಇನ್ನೂ ಹೆಚ್ಚಿನ ವಿಚಾರಣೆ ಮತ್ತು ತನಿಖೆ ನಡೆಸಿದ್ದೇವೆ. ಈ ಕೊಲೆ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತರಲ್ಲಿ ಕೆಲವರು ಕ್ರಿಮಿನಲ್ ಹಿನ್ನೆಲೆ ಇರುವವರೂ ಇದ್ದಾರೆ. ಈ ಕೊಲೆ ಮಾಡಲು ಫೈರೋಜನನ್ನು ಆರೋಪಿಗಳು ಹಲವು ದಿನಗಳಿಂದ ವಾಚ್ ಮಾಡುತ್ತಿದ್ದರು. ಫೈರೋಜ್‌ನ ಮದುವೆ ಇದ್ದ ಕಾರಣ ಆತ ಹುಡುಗರನ್ನು ಕರೆದುಕೊಂಡು ಓಡಾಡುತ್ತಿದ್ದ. ಆದರೆ, ಆರೋಪಿಗಳು ಫೈರೋಜ್ ಹುಡುಗರನ್ನು ಕರೆದುಕೊಂಡು ತಿರುಗಾಡುತ್ತಿದ್ದಾನೆ ಎಂದು ತಿಳಿದುಕೊಂಡಿದ್ದರು. ಫೈರೋಜ್‌ನನ್ನು ಕೊಲೆ ಮಾಡಲು ಆರೋಪಿಗಳು ಕೆಲ ದಿನಗಳಿಂದಲೇ ತಯಾರಿ ಮಾಡಿಕೊಂಡಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

ಕಳೆದ ಶುಕ್ರವಾರ ಫೈರೋಜನ ಮನೆಗೆ ಹೋದ ಆರೋಪಿಗಳು ಮನೆಯಲ್ಲಿ ಗಂಡು ಮಕ್ಕಳು ಯಾರೂ ಇಲ್ಲದ್ದನ್ನು ಗಮನಿಸಿ ಕೊಲೆ ಮಾಡಿದ್ದಾರೆ. ಮೊದಲಿಗೆ ಇವರೆಲ್ಲ ಸೇರಿಕೊಂಡು ಪ್ಲ್ಯಾನ್ ಕೂಡ ಮಾಡಿದ್ದರು ಎಂದು ಗೊತ್ತಾಗಿದೆ. ಸದ್ಯ 9 ಜನರನ್ನು ಬಂಧಿಸಿರುವ ಪೊಲೀಸರು ಈ ಘಟನೆ ಸಂಬಂಧ ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್