LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪೊಲೀಸರ ವಿಶೇಷ ಕಾರ್ಯಾಚರಣೆ : 4 ಮಂದಿಯ ವಿರುದ್ಧ ಎನ್‌ಡಿಪಿಎಸ್  ಪ್ರಕರಣ ದಾಖಲು 

ಬಳ್ಳಾರಿ, ಜು. 14 : ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಕುಡುಕರ ವಿರುದ್ಧ  ಜಿಲ್ಲಾ ಪೊಲೀಸ್ ಇಲಾಖೆ ನಿನ್ನೆ ಸಂಜೆ ನಗರದಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಾಲ್ವರು ಮಾದಕ ವಸ್ತು ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಅವರ ವಿರುದ್ಧ ಏನ್ ಡಿ ಪಿ ಎಸ್ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್ ಪಿ ಸುಮನ್ ಡಿಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ನಿನ್ನೆ ಸಂಜೆ 7 ಗಂಟೆಯಿಂದ 8:00 ಸಮಯದೊಳಗೆ ನಗರದ ಸುತ್ತಮುತ್ತಲಿನ ಹೊಸ ಬಡಾವಣೆ ಫುಟ್ಪಾತ್ ಪಾರ್ಕ್ ಸೇರಿದಂತೆ ಜನನಿಘಡ ಪ್ರದೇಶದಲ್ಲಿ ಓಪನ್ ಏರಿಯಾಗಳಲ್ಲಿ ಮಧ್ಯಪಾನ ಮಾಡುತ್ತಿದ್ದವರ ಮೇಲೆ 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಐಪಿಎಸ್ ಅವರ ನಿರ್ದೇಶನದಂತೆ ಜು. 10 ಮತ್ತು 11ರಂದು ಎರಡು ದಿನ ಸಾರ್ವಜನಿಕರಿಂದ ಬಂದ ಮಾಹಿತಿಯ ಆಧಾರದ ಮೇಲೆ ರಸ್ತೆ ಬದಿ, ಉದ್ಯಾನವನಗಳು, ಶಾಲಾ ಮೈದಾನಗಳು, ನಗರದ ಹೊರವಲಯದ ಖಾಸಗಿ ಲೇಔಟ್‌ಗಳು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲಾಯಿತು.
ಕಾರ್ಯಾಚರಣೆಯಲ್ಲಿ ಒಟ್ಟು 174 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಲ್ಲಿ 111 ಮಂದಿಯನ್ನು ಮಾದಕ ವಸ್ತು ಸೇವನೆ ಶಂಕೆ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಲ್ಲಿ ನಾಲ್ವರು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದ್ದು, ಅವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಳಿದ 170 ಮಂದಿಯ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆಯಡಿ ಲಘು ಪ್ರಕರಣಗಳನ್ನು ದಾಖಲಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ಮದ್ಯಪಾನ ಅಥವಾ ಮಾದಕ ವಸ್ತು ಸೇವನೆ ಮಾಡುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿರಂತರ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದ್ದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ನಗರದ ಮಾದಕ ವಸ್ತು ಚಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್