LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಕಾಶವಾಣಿಯ ರಾಷ್ಟ್ರೀಯ ಸರ್ವಭಾಷಾ ಕವಿ ಸಮ್ಮೇಳನಕ್ಕೆ ಪ್ರಕಾಶ ಖಾಡೆ ಆಯ್ಕೆ

ಬಾಗಲಕೋಟೆ ೨೪.-ಗಣರಾಜ್ಯೋತ್ಸವ ಅಂಗವಾಗಿ ಪ್ರತಿವರ್ಷ ಆಕಾಶವಾಣಿ ಹಮ್ಮಿಕೊಳ್ಳುವ ರಾಷ್ಟ್ರೀಯ ಬಹುಭಾಷಾ ಕವಿ ಸಮ್ಮೇಳನಕ್ಕೆ ಈ ಬಾರಿ ನಗರದ ಕವಿ ಡಾ.ಪ್ರಕಾಶ ಗ.ಖಾಡೆ ಆಯ್ಕೆಯಾಗಿದ್ದಾರೆ. ಜನೆವರಿ ೨೫ ರವಿವಾರ ಗಣರಾಜ್ಯೋತ್ಸವ ಮುನ್ನಾದಿನದಂದು ರಾಜ್ಯದ ಎಲ್ಲಾ ಬಾನುಲಿ ಕೇಂದ್ರಗಳಿಂದ ರಾತ್ರಿ ೧೦ ಗಂಟೆಗೆ ಕವಿ ಸಮ್ಮೇಳನ ಪ್ರಸಾರವಾಗಲಿದೆ. ಬೆಂಗಾಲಿ ಕವಿ ಸೌಮಿತ್ ಬಸು ಅವರ ಬೆಂಗಾಲಿ ಕವಿತೆಯ ಕನ್ನಡ ಅನುವಾದವನ್ನು ಡಾ.ಪ್ರಕಾಶ ಖಾಡೆ ವಾಚನ ಮಾಡಲಿದ್ದಾರೆ. ಭಾಷಾ ಬಾಂಧವ್ಯದ ಮೂಲಕ ರಾಷ್ಟ್ರೀಯ ಭಾವೈಕ್ಯತೆಯ ಘನ ಉದ್ದೇಶವನ್ನು ಹೊಂದಿರುವ ಈ ಕವಿ ಸಮ್ಮೇಳನದಲ್ಲಿ ದೇಶದ ಬೇರೆ ಬೇರೆ ರಾಜ್ಯಗಳ ಕವಿಗಳು ತಮ್ಮ ಭಾಷೆಯಲ್ಲಿ ಕವಿತೆ ವಾಚಿಸುತ್ತಾರೆ, ಹೀಗೆ ವಾಚಿಸಿದ ಸಂಸ್ಕೃತ, ಆಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಕಾಶ್ಮೀರಿ, ತೆಲಗು, ತಮಿಳು, ಮಲಯಾಳಂ, ಪಂಜಾಬಿ, ಸಿಂಧಿ, ಕೊಂಕಣಿ ಈ ಮೊದಲಾದ ಭಾಷೆಗಳಲ್ಲಿ ಅಲ್ಲಿನ ಕವಿಗಳು ಓದಿದ ಕವಿತೆಗಳನ್ನು ಕನ್ನಡದ ಕವಿಗಳು ಅನುವಾದ ಮಾಡಿ ವಾಚಿಸಲಿದ್ದು, ಬೆಂಗಾಲಿಯಿಂದ ಕನ್ನಡಕ್ಕೆ ಅನುವಾದಿಸಿದ ಕವಿತೆಯನ್ನು ಡಾ.ಖಾಡೆ ವಾಚಿಸಲಿದ್ದಾರೆ. ಲೇಖಕ, ಕಥೆಗಾರ, ಜಾನಪದ ತಜ್ಞರಾಗಿ ಗುರುತಿಸಿಕೊಂಡಿರುವ ಖಾಡೆಯವರು, ಕವಿಯಾಗಿಯೂ ಹೆಸರಾಗಿದ್ದಾರೆ, ಈ ವರೆಗೆ ಅವರ ಗೀತಚಿಗಿತ, ಸಾಲು ಹನಿಗಳು, ಕಣ್ಣುಗಳಿಗೆ ಮೌನ ಅರ್ಥವಾಗುತ್ತದೆ, ಶಾಂತಿ ಬೀಜಗಳ ಜತನ ಮೊದಲಾದ ಕವನ ಸಂಕಲನಗಳು ಪ್ರಕಟವಾಗಿವೆ. ಕವಿ ಖಾಡೆ ಅವರನ್ನು ಆಕಾಶವಾಣಿ ಧಾರವಾಡ ಕೇಂದ್ರದ ನಿರ್ದೇಶಕರಾದ ಶರಣಬಸವ ಚೋಳಿನ ಅಭಿನಂದಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್