LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಯನಾಡ್ ಭೇಟಿಗೂ ಮುನ್ನ ಬೆಂಗಳೂರಿಗೆ ರಾಹುಲ್, ಪ್ರಿಯಾಂಕಾ

ಬೆಂಗಳೂರು, ಜೂನ್ 11: ಕಾಂಗ್ರೆಸ್  ಸಂಸದ ರಾಹುಲ್ ಗಾಂಧಿ  ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾತ್ರಿ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ರಾಹುಲ್​​, ಪ್ರಿಯಾಂಕಾರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಳ್ಳಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್​ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಉಭಯ ನಾಯಕರು ನಾಳೆ ಬೆಳಗ್ಗೆ ಕೇರಳದ ವಯನಾಡ್​​ಗೆ ತೆರಳಲಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ರಾಹುಲ್ ಹಾಗೂ ಪ್ರಿಯಾಂಕಾ ಕೇರಳದ ಮಲಪ್ಪುರಂ ಜಿಲ್ಲೆ ಹಾಗೂ ಕಲ್ಪಟ್ಟಾದಲ್ಲಿ ಬುಧವಾರ ಮತದಾರರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಗಾಂಧಿ ವಯನಾಡ್ ತೊರೆದು ರಾಯ್​ಬರೇಲಿ ಉಳಿಸಿಕೊಂಡರೆ ಅವರ ಸ್ಥಾನಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ರಾಯಬರೇಲಿಯನ್ನು ಉಳಿಸಿಕೊಂಡು ಹಾಲಿ ಕ್ಷೇತ್ರವಾದ ವಯನಾಡನ್ನು ಹೊರಗಿಡುವ ಬಗ್ಗೆ ರಾಹುಲ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್