LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಕಾರ್ಮಿಕರ  ರಕ್ಷಣೆ



ವಿಜಯನಗರ (ಹೊಸಪೇಟೆ) ಮೇ.14:   ಜಿಲ್ಲೆಯ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿ ಎಂಬಲ್ಲಿ ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಸ್ಪಂದನ ಎಂಬ ಎನ್‌ಜಿಓ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ  ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಹಾಯಕ ಆಯುಕ್ತರು ನಂದಿಬಂಡಿ ಗ್ರಾಮದ ಮೇಲೆ ದಾಳಿ ನಡೆಸಿದರು.
ದಾಳಿಯ ವೇಳೆ ಕಾರ್ಮಿಕರು  ನಾಲ್ಕು ಅಡಿ ಅಗಲದ ಪುಟ್ಟ ಮನೆಗಳಲ್ಲಿ  ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ದಯನೀಯ ಸ್ಥಿತಿಯಲ್ಲಿ ಬದುಕುತ್ತಿದ್ದ  10 ಮಕ್ಕಳು, 11 ಮಹಿಳೆಯರು,  16 ಪುರುಷರು ಸೇರಿದಂತೆ ಒಟ್ಟು 37 ಮಂದಿ ಕಾರ್ಮಿಕರು ಇದ್ದು, ಎಲ್ಲರೂ ಒಡಿಶಾದ ಬಲಂಗೀರ್ ಮತ್ತು ನವರಂಗ್‌ಪುರ ಜಿಲ್ಲೆಯವರಾಗಿದ್ದಾರೆ.

 ಈ ಕಾರ್ಮಿಕರನ್ನು ಒಡಿಶಾದಿಂದ ಕರೆತರಲಾಗಿದ್ದು, ಆರು ತಿಂಗಳ ಹಿಂದೆ ಪ್ರತಿ ವ್ಯಕ್ತಿಗೆ 40,000 ರೂಪಾಯಿ ಮುಂಗಡ ಹಣ ನೀಡಿ ಇಲ್ಲಿಗೆ ಕರೆತರಲಾಗಿತ್ತು.  ಆರಂಭದಲ್ಲಿ ಆರು ತಿಂಗಳ ಅವಧಿಗೆ ಅಷ್ಟೇ ಕೆಲಸ ಮಾಡಿಸುವುದಾಗಿ ಹೇಳಿ ಕರೆತರಲಾಗಿತ್ತು. ಹಾಗೆಯೇ ಕೆಲಸದ ಆಧಾರದ ಮೇಲೆ ಹಣ ನೀಡುತ್ತೇವೆ ಎಂಬ ಭರವಸೆಯೂ ನೀಡಲಾಗಿತ್ತು.  ಅದರಂತೆ ಹಣದ ಆಸೆಗೆ ವಾರವಿಡೀ ಮೈ ಮುರಿದು  ಕೆಲಸ ಮಾಡಿದರೂ ಸಹ, ಇಡೀ ಕುಟುಂಬಕ್ಕೆ ವಾರಕ್ಕೆ ಕೇವಲ 500 ರೂಪಾಯಿ ಮಾತ್ರ ನೀಡುತ್ತಾರೆ. ಆದರಿಂದ ನಾವು ಆರು ತಿಂಗಳ ಹಿಂದೆ ಬಂದಿದ್ದೆವು. ನಮ್ಮ ಅವಧಿ ಮುಗಿದಿದೆ ನಾವು ಹೋಗುತ್ತೇವೆ ಎಂದು ಹೇಳಿದಾಗ ನೀವು ತಲಾ 40,000 ರೂಪಾಯಿ ಪಡೆದು ಬಂದಿದ್ದೀರಿ, ಹೋಗುವಂತಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು. ಹೊರ ಪ್ರಪಂಚದ ಸಂಪರ್ಕವಿಲ್ಲದಂತೆ  ಕಾಯಲು ಸೆಕ್ಯೂರಿಟಿ ಗಾರ್ಡ್  ನೇಮಿಸಲಾಗಿತ್ತು ಎಂದು ಸಂತ್ರಸ್ತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

 ಈ ವೇಳೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಪ್ರತಿಕ್ರಿಯಿಸಿ, ಇದು ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಜೀತ ಪದ್ಧತಿಯಂತಹ ಅನಿಷ್ಟ ಪದ್ಧತಿಯನ್ನು ಬೆಂಬಲಿಸುವವರ ವಿರುದ್ಧ ಈಗಾಗಲೇ ಮರಿಯಮ್ಮನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಿಸಲಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು .

 ನಿಟ್ಟುಸಿರು ಬಿಟ್ಟ ಕಾರ್ಮಿಕರು :
ಒತ್ತೆಯಾಳುಗಳಾಗಿದ್ದ ಒಡಿಶಾ ಮೂಲದ 37 ಜೀವಗಳಿಗೆ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ.  ಜಿಲ್ಲಾಡಳಿತದ ಮಿಂಚಿನ ಕಾರ್ಯಾಚರಣೆಯಿಂದಾಗಿ ಜೀತ ಪದ್ಧತಿಯ ಸಂಕೋಲೆಯಲ್ಲಿ ನಲುಗುತ್ತಿದ್ದ 37 ಕಾರ್ಮಿಕರು ಇಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
 ಸಹಾಯಕ ಆಯುಕ್ತ ವಿವೇಕಾನಂದ ಅವರ ನೇತೃತ್ವದ ತಂಡವು ನಂದಿಬಂಡಿ ಗ್ರಾಮದ ಮೇಲೆ ದಾಳಿ ನಡೆಸಿ, ಜೀತ ಪದ್ಧತಿಯಲ್ಲಿ ಸಿಲುಕಿದ್ದ  37 ಕಾರ್ಮಿಕರ ಯಶಸ್ವಿಯಾಗಿ ರಕ್ಷಿಸಲಾಗಿದೆ. ಸುದೀರ್ಘ ಕಾಲದ ನಂತರ ದಬ್ಬಾಳಿಕೆಯಿಂದ ಮುಕ್ತರಾದ ಕಾರ್ಮಿಕರ ಮುಖದಲ್ಲಿ ಮಂದಹಾಸ ಮೂಡಿತ್ತು. ಪಂಜರದಿಂದ ಬಿಡುಗಡೆಯಾದ ಹಕ್ಕಿಗಳಂತೆ ಎಲ್ಲರ ಮೊಗದಲ್ಲಿ ಸ್ವತಂತ್ರದ ಸಂಭ್ರಮ ಮನೆ ಮಾಡಿತ್ತು.
 ಜಿಲ್ಲಾಡಳಿತ ಕೇವಲ ರಕ್ಷಣೆಗೆ ಸೀಮಿತವಾಗದೇ, ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಸ್ವಗ್ರಾಮಕ್ಕೆ ಕಳುಹಿಸುವಲ್ಲಿ ವಿಶೇಷ ಕಾಳಜಿ ವಹಿಸಿತು. ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ  ಖುದ್ದಾಗಿ ಹಾಜರಿದ್ದು, ರೈಲಿನ ಮೂಲಕ ಅವರ ಸ್ವ ಗ್ರಾಮಕ್ಕೆ ಕಳುಹಿಸಿಕೊಡುವ ವ್ಯವಸ್ಥೆ  ಮಾಡಿದರು. ಅದಷ್ಟೇ ಅಲ್ಲದೇ ಕಾರ್ಮಿಕರೊಂದಿಗೆ ಇಬ್ಬರು ಪೋಲೀಸ್  ಮತ್ತು ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಹ ರಕ್ಷಣೆಗಾಗಿ ಕಳುಹಿಸಿಕೊಡಲಾಗಿದೆ.
ಈ ವೇಳೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಾಹ್ನವಿ, ಡಿವೈಎಸ್ಪಿ ಪಿ.ಮುರಳೀಧರ, ಉಪವಿಭಾಗಾಧಿಕಾರಿ ವಿವೇಕಾನಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

******

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್