LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಈಶ್ವರ್ ಸಿಂಗ್ ದಹಿಯಾ ಬಂಧನ ಖಂಡಿಸಿ ಪ್ರತಿಭಟನೆ

ಬಳ್ಳಾರಿ,ಜು.23: Ä ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ಹರಿಯಾಣದಲ್ಲಿ ನಡೆದ ರೈತ ಹೋರಾಟಗಾರರ ಬಂಧನವನ್ನು ಖಂಡಿಸಿ ಎ ಐ ಕೆ ಕೆ ಎಂ ಎಸ್ ರೈತ ಸಂಘಟನೆ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿರಾಜ ಮಾತನಾಡುತ್ತಾ, ಜುಲೈ ೨೨ ರಂದು Sಏಒ ಮತ್ತು ಂIಏಏಒS ಆಯೋಜಿಸಿದ್ದ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧದ ಪ್ರತಿಭಟನೆಯನ್ನು ವಿಫಲಗೊಳಿಸಲು, ಹರಿಯಾಣ ರಾಜ್ಯದ ಪೊಲೀಸರು  ಂIಏಏಒS ನ ಹರಿಯಾಣ ರಾಜ್ಯ ಸಮಿತಿ ಸದಸ್ಯ ಕಾಮ್ರೇಡ್ ಈಶ್ವರ್ ಸಿಂಗ್ ದಹಿಯಾ ಅವರನ್ನು ಬಂಧಿಸಿದ್ದಾರೆ. ಹರಿಯಾಣದ ಬಿಜೆಪಿ ಸರ್ಕಾರದ ಈ ಹೇಯ ಕೃತ್ಯವನ್ನು ಎ ಐ ಕೆ ಕೆ ಎಂ ಎಸ್ ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ.
ಕೇAದ್ರ ಸರ್ಕಾರ ಅಮೆರಿಕಾದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡರೆ ಅಲ್ಲಿನ ಕೃಷಿ  ಉತ್ಪನ್ನಗಳು ಅತೀ ಕಡಿಮೆ ಬೆಲೆಗೆ ಭಾರತದ ಮಾರುಕಟ್ಟೆಯನ್ನು ಪ್ರವೇಶಿಸಿ, ಇಲ್ಲಿನ ರೈತರ ಬೆಳೆಗೆ ಸಿಗಬೇಕಾದ ಬೆಲೆ ಸಿಗದೆ, ರೈತರು ಸಂಪೂರ್ಣವಾಗಿ ನಷ್ಟಕ್ಕಿಡಾಗುತ್ತಾರೆ, ಈ ರೀತಿ ರೈತರಿಗೆ ನಷ್ಟ ತರುವ ಈ ಭಾರತ ಅಮೇರಿಕಾ ಒಪ್ಪಂದದ ವಿರುದ್ಧ ಇಂದು ನಡೆಯಬೇಕಾಗಿದ್ದ ಬೃಹತ್ ಹೋರಾಟವನ್ನು ಸರ್ಕಾರ ಹತ್ತಿಕ್ಕಲು ಹೋರಾಟಗಾರರನ್ನು ಬಂಧಿಸಲು ಮುಂದಾದಲ್ಲಿ, ಇದರ ವಿರುದ್ಧ ಇನ್ನು ಬಲಿಷ್ಠ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ. ಆದ್ದರಿಂದ
ಈ ಕೂಡಲೇ  ಹರಿಯಾಣದಲ್ಲಿ ಬಂಧಿಸಿರುವ ರೈತ ಹೋರಾಟಗಾರ ಈಶ್ವರ್ ಸಿಂಗ್ ದಹಿಯಾ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಸಂಘದ ರಾಜ್ಯ ಮುಖಂಡರಾದ ಈ.ಹನುಮಂತಪ್ಪ,  ಸದಸ್ಯರಾದ ಸಂತೋಷ್, ಮೊಹಮದ್ ರಫಿ ರೈತರಾದ ವೀರೇಶ್, ಗಂಗಣ್ಣ, ಹೇಮಣ್ಣ, ಬಸಪ್ಪ, ಗೊಲ್ಲರ ಹನುಮಂತಪ್ಪ ಸೇರಿದಂತೆ ಹಲವಾರು ರೈತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್