LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಇಂಡಿ,ಏ.೧೭ : ಕರ್ನಾಟಕ ರಾಜ್ಯ ಇಂಡಿ ತಾಲೂಕಿನ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದಿಂದ ತಮ್ಮ ವಿವಿಧ ಬೇಡಿಕೆ ಆಗ್ರಹಿಸಿ ಆಡಳಿತಸೌಧದಲ್ಲಿ ಪ್ರತಿಭಟನೆ ನಡೆಸಿದರು.
ಇಂಡಿ ತಾಲೂಕಾ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ದಾನಮ್ಮ ಹೂಗಾರ ಮಾತನಾಡಿ ಹಿಂದುಳಿದ ವರ್ಗಗಳ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ ಹಾಗೂ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು ಕಾವಲುಗಾರರು ಜವಾನರು ನರ್ಸಗಳು ಕಂಪ್ಯೂಟರ ಅಪರೇಟರಗಳು ಡಾಟಾ ಎಂಟ್ರಿ ಅಪರೇಟರಗಳು , ಸುಮಾರು ಹದಿನೈದು ವರ್ಷದಿಂದ ಇಪ್ಪತ್ತು ವರ್ಷಗಳ ವರೆಗೆ ಕೆಲಸ ಮಾಡುತ್ತಿದ್ದಾರೆ.
ಅವರಿಗೆ ಕನಿಷ್ಠ ವೇತನ ಜಾರಿ ಆಗಬೇಕು ಎಲ್ಲಾ ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ ಖಾಯಂ ಮಾಡಬೇಕು. ಏಪ್ರೀಲ ಮತ್ತು ಮೇ ತಿಂಗಳ ಅವಧಿಯಲ್ಲಿ ಹಾಸ್ಟೆಲ ನೌಕರರಿಗೆ ರಜಾ ಸಹಿತ ವೇತನ ನೀಡಬೇಕು ಎಂದರು.
ತಾಲುಕಾ ಪ್ರಧಾನ ಕಾರ್ಯದರ್ಶಿ ರಜನಿ ಬನಸೋಡೆ, ಕಲಾವತಿ ಕಾಳೆ, ಯಲ್ಲಮ್ಮ ಮದಭಾವಿ ಶಾರದಾ ಬಿರಾದಾರ, ಪ್ರೇಮಾವತಿ ಬಜಂತ್ರಿ ರೇಣುಕಾ ಬಾರಾಸೆ ಶಶಿಕಲಾ ಕಮತಿ ಗೀರಿಜಾ ಮದಭಾವಿ ಸುಮಂಗಲಾ ಕುಂಬಾರುವಮ್ಮ ಕಾಪಸೆ ಶೋಭಾ ಬಾರಿಕಾಯಿ, ಪ್ರಕಾಶ ದೇಸಾಯಿ, ದಾವಲಸಾಬ ಕಸ್ಸಾಬ ಮತ್ತಿತರಿದ್ದರು.
ತಹಸೀಲ್ದಾರ ಬಿ.ಎಸ್ ಕಡಕಬಾವಿ ಇವರಿಗೆ ಮನವಿ ಅರ್ಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್