LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಕುಡಿವ ನೀರಿನ ಸಮಸ್ಯೆಗೆ ತ್ವರಿತ ಪರಿಹಾರ*

 

 

ಕೊಪ್ಪಳ, ಜುಲೈ 20: ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಗೇಶನಹಳ್ಳಿ ಗ್ರಾಮಸ್ಥರಿಗೆ ಕುಡಿವ ನೀರಿನ ಭವಣೆ ತಪ್ಪಿದೆ.
ಕುಡಿವ ನೀರಿಗಾಗಿ ಗ್ರಾಮಸ್ಥರು ತೀವ್ರ ತೊಂದರೆ ಆಗುತ್ತಿರುವುದನ್ನು ಪರಿಶೀಲಿಸಲು ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಅವರು ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ಎರಡು ದಿನಗಳೊಳಗೆ ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರಿಂದಾಗಿ ಗ್ರಾಮಕ್ಕೆ ತ್ವರಿತವಾಗಿ ನೀರು ಸಿಗಲು ಸಾಧ್ಯವಾಗಿದೆ. 
ಈ ಗ್ರಾಮದಲ್ಲಿ 
ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಹೊಸ ಬೋರವೆಲ್ ಕೊರೆಯಿಸಿ ಪೈಪಲೈನ್ ಮಾಡಿದ್ದರು ಸಹ ಬೋರವೆಲನ ಅಂತರ್ಜಲ ಮಟ್ಟ ಕಡಿಮೆಯಿಂದಾಗಿ ನೀರು ವೇಗವಾಗಿ ಬರುತ್ತಿರಲಿಲ್ಲ. ಇದರಿಂದಾಗಿ ಗ್ರಾಮಸ್ಥರಿಗೆ ತೊಂದರೆಯಾಗಿತ್ತು.
ಈಗ ಖಾಸಗಿ ಬೋರವೆಲನ್ನು ಗ್ರಾಮ ಪಂಚಾಯತಿಯಿಂದ ಗುತ್ತಿಗೆ ಪಡೆದು ಪೈಪಲೈನ ಮೂಲಕ ನೀರು ಒದಗಿಸಿ ನಾಗೇಶನಹಳ್ಳಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ತಾ.ಪಂ ಇಓ ದುಂಡಪ್ಪ ತುರಾದಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬೂದಗುಂಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ, ಉದ್ಯೋಗ ಖಾತ್ರಿಯ ಮೇಟಗಳು ಮತ್ತು ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್