LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ: ರಾಘವೇಂದ್ರ ನೀಲಣ್ಣವರ

ಮಹಾಲಿಂಗಪುರ: ಅ.20: ಮಹಾಲಿಂಗಪುರ ಸಮೀಪದ ಕೆಸರಗೊಪ್ಪ ಗ್ರಾಮಾದ ಸರಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ದಂದು ಸ್ವಾಸ್ತ್ಯ ಸಂಕಲ್ಪ ಮಾದಕ ವಸ್ತು ವಿರೋಧಿ ದಿನ ಜಾಗೃತಿ
ಕಾರ್ಯಕ್ರಮ ಜರಗಿತು.

ಸಂಪನ್ಮೂಲ ವ್ಯಕ್ತಿಗಳು, ಪತ್ರಕರ್ತರು, ಯೋಗ ಶಿಕ್ಷಕರಾದ ರಾಘವೇಂದ್ರ ನೀಲಣ್ಣವರ ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾದಾಗ ಮಾತ್ರ ಉತ್ತಮ ಆರೋಗ್ಯ ಜೀವನ ಹೊಂದಲು ಸಾಧ್ಯವಾಗುತ್ತದೆ.ದುಶ್ಚಟ ದಿಂದ ಆಗುವ ಅನಾಹುತಗಳೆಂದರೆ ಸಾಮಾಜಿಕ ಗೌರವವನ್ನು ಕಳೆದುಕೊಳ್ಳುವದೊಂದಿಗೆ ಆರ್ಥಿಕ, ಕೌಟುಂಬಿಕ ಅನೇಕ ಸಂಕಷ್ಟಗಳಿಗೆ ತುತ್ತಾಗಿ ದೈಹಿಕ,
ಮಾನಸಿಕ ಖಾಯಿಲೆಗಳಿಗೆ ತುತ್ತಾಗುತ್ತೇವೆ. ಆದ್ದರಿಂದ ದುಶ್ಚಟಗಳಿಂದ ದೂರ ಇರಬೇಕು, ವಿದ್ಯಾರ್ಥಿ ಜೀವನವು ತ್ಯಾಗಮಯ ಜೀವನವಾಗಬೇಕು, ಅಂದಾಗ ಶೈಕ್ಷಣಿಕ ಸಾಧನೆ ಸಾಧಿಸಲು
ಸಾಧ್ಯವಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಗುರುಗಳಾದ ವ್ಹಿ.ಸಿ. ಚೌಧರಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಕುರಿತು
ವಲಯದ ಮೇಲ್ವಿಚಾರಕರಾದ ರೇಣುಕರಾಜ್ ಪ್ರಾಸ್ತವಿಕವಾಗಿ ಮಾತನಾಡಿದರು. ಸಹ ಶಿಕ್ಷಕರಾದ ಸಂಗಮೇಶ ಗುರುಗಳು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ
ಶಾಲೆಯ ಸಹ ಶಿಕ್ಷಕರು, ಸೇವಾಪ್ರತಿನಿಧಿಗಳಾದ ಭಾರತಿ, ಶೋಭಾ, ವಿಪತ್ತು ನಿರ್ವಹಣೆ ಸ್ವಯಂ ಸೇವಕರಾದ ರೇಖಾ ಸೋನಾರ ಹಾಗೂ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್