LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅಮೇಥಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಧೈರ್ಯವಿಲ್ಲ: ರಾಜನಾಥ್ ಸಿಂಗ್

ಪತ್ತನಂತಿಟ್ಟ,ಏಪ್ರಿಲ್ 18: 2019ರಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸೋತ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೆ ಅಲ್ಲಿಂದ ಸ್ಪರ್ಧಿಸುವ ಧೈರ್ಯವಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಅಮೇಥಿಯಲ್ಲಿ ಸೋಲು ಅನುಭವಿಸಿದ ನಂತರ ರಾಹುಲ್ ಗಾಂಧಿ ಉತ್ತರ ಪ್ರದೇಶದಿಂದ ಕೇರಳಕ್ಕೆ ವಲಸೆ ಬಂದರು ಎಂದು ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದರು.

ಇಂದು ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಕೆ ಆಂಟನಿ ಅವರ ಪರ ಪ್ರಚಾರ ನಡೆಸಿದ ರಾಜನಾಥ್ ಸಿಂಗ್ ಅವರು, ಈ ಬಾರಿ ವಯನಾಡಿನ ಜನ ರಾಹುಲ್ ಗಾಂಧಿಯನ್ನು ತಮ್ಮ ಸಂಸದರನ್ನಾಗಿ ಆಯ್ಕೆ ಮಾಡದಿರಲು ನಿರ್ಧರಿಸಿದ್ದಾರೆ ಎಂದರು.

ದೇಶದಲ್ಲಿ ವಿವಿಧ ಬಾಹ್ಯಾಕಾಶ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಲಾಂಚ್ ಮಾಡುತ್ತಿರುವಾಗ, "ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಯುವ ನಾಯಕನನ್ನು ಲಾಂಚ್ ಮಾಡಲು ಸಾಧ್ಯವಾಗುತ್ತಿಲ್ಲ" ಎಂದು ರಾಜನಾಥ್ ಸಿಂಗ್ ವ್ಯಂಗ್ಯವಾಡಿದರು.

"ಕಾಂಗ್ರೆಸ್ ಪಕ್ಷದ 'ರಾಹುಲ್ ಯಾನ' ಇನ್ನೂ ಲಾಂಚ್ ಆಗಿಲ್ಲ ಅಥವಾ ಎಲ್ಲಿಯೂ ಲ್ಯಾಂಡ್ ಸಹ ಆಗಿಲ್ಲ" ಎಂದು ವಯನಾಡ್ ಕಾಂಗ್ರೆಸ್ ಸಂಸದರ ವಿರುದ್ಧ ರಕ್ಷಣಾ ಸಚಿವರು ವಾಗ್ದಾಳಿ ನಡೆಸಿದರು.

ತಮ್ಮ ಭಾಷಣದಲ್ಲಿ, ಕಾಂಗ್ರೆಸ್ ಹಿರಿಯ ನಾಯಕ ಎ ಕೆ ಆಂಟನಿ ಅವರನ್ನು ಹೊಗಳಿದ ರಾಜನಾಥ್ ಸಿಂಗ್, ಅವರು ಒಬ್ಬ ಶಿಸ್ತುಬದ್ಧ ಮತ್ತು ತತ್ವಬದ್ಧ ವ್ಯಕ್ತಿ ಎಂದು ಕರೆದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಅನಿಲ್ ಆಂಟೋನಿ ಸೋಲಬೇಕು ಎಂಬ ಆ್ಯಂಟನಿ ಹೇಳಿಕೆ ಓದಿ ಆಶ್ಚರ್ಯವಾಯಿತು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ