LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೀಟ್ ಎಕ್ಸಾಂ ಬರೆಯಲು ನಿರಾಕರಣೆ: ಕಣ್ಣೀರಿಟ್ಟ ವಿದ್ಯಾರ್ಥಿನಿಯರು

ಬೆಂಗಳೂರು,

ನೀಟ್ (NEET) ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಕೆಲವೇ ನಿಮಿಷ ತಡವಾಗಿ ಆಗಮಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ (Students) ಪ್ರವೇಶ ನಿರಾಕರಿಸಿದ ಘಟನೆ ಬೆಂಗಳೂರಿನ ಎರಡು ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ.

ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜ್​ ಮತ್ತು ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ ಕಾಲೇಜಿನ ಎಕ್ಸಾಂ ಸೆಂಟರ್‌ನಲ್ಲಿ ಘಟನೆ ಕಂಡುಬಂದಿವೆ. ಮಧ್ಯಾಹ್ನ 2 ಗಂಟೆಗೆ ನೀಟ್ ಎಕ್ಸಾಂ ಆರಂಭವಾಗಿದೆ. ಮಧ್ಯಾಹ್ನ 1.30ರವರೆಗೆ ಎಕ್ಸಾಂ ಸೆಂಟರ್‌ನ ಗೇಟ್‌ ಓಪನ್​ ಮಾಡಲಾಗಿತ್ತು. 

ಯಲಹಂಕದ ಪ್ರಥಮ ದರ್ಜೆ ಕಾಲೇಜಿಗೆ ನೀಟ್ ಎಕ್ಸಾಂ ಬರೆಯಲು ಓರ್ವ ವಿದ್ಯಾರ್ಥಿನಿ ಆಗಮಿಸಿದ್ದಾರೆ. ಆದರೆ ಅಷ್ಟರಲ್ಲಿ 10 ನಿಮಿಷ ತಡವಾಗಿದೆ. ಹೀಗಾಗಿ ಸಿಬ್ಬಂದಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ್ದಾರೆ. ಇನ್ನು ಇದೇ ರೀತಿಯಾಗಿ ನಗರದ ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ ಕಾಲೇಜಿನಲ್ಲೂ ಘಟನೆ ನಡೆದಿದೆ.

ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು 

ಅತ್ತಿಬೆಲೆಯಿಂದ ಓರ್ವ ವಿದ್ಯಾರ್ಥಿನಿ ಎಕ್ಸಾಂ ಸೆಂಟರ್​ಗೆ ತಡವಾಗಿ ಆಗಮಿಸಿದ್ದಾಳೆ. ಟ್ರಾಫಿಕ್‌ಜಾಮ್‌ನಿಂದ 20 ನಿಮಿಷ ತಡವಾಗಿ ಬಂದಿದ್ದ ಯುವತಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಗೇಟ್ ಕ್ಲೋಸ್ ಆಗಿದೆ, ಪ್ರೊಸೀಜರ್ ಮುಗಿದಿದೆ. ಏನು ಮಾಡುವುದಕ್ಕೆ ಆಗಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ವರ್ಷವಿಡೀ ಕಷ್ಟಪಟ್ಟು ಓದಿದರೂ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲವಲ್ಲ ಎಂದು ವಿದ್ಯಾರ್ಥಿನಿಯರು ಮರುಗಿದರು.

2026-27ನೇ ಸಾಲಿನ ವೈದ್ಯಕೀಯ ಪ್ರವೇಶಾತಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಇಂದು ನಡೆದಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆದಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಬರಬೇಕು. ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಹಿತ ಹಾಜರಾಗುವಂತೆ ತಿಳಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್