LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೊಂದಾಯಿಸಿಕೊಳ್ಳಿ : ಡಿಸಿ



ಕೊಪ್ಪಳ ಜೂನ್ 19: ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಮತ್ತು ನೌಕರರು ಕಡ್ಡಾಯವಾಗಿ ಕರ್ತವ್ಯ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೊಂದಾಯಿಸಿಕೊಳ್ಳುವAತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸೂಚನೆ ನೀಡಿದ್ದಾರೆ.
 ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಬೆಂಗಳೂರು ರವರು ಟಿಪ್ಪಣಿ ಪತ್ರದಲ್ಲಿ ತಿಳಿಸಿರುವಂತೆ, ಮಾನ್ಯ ಮುಖ್ಯಮಂತ್ರಿಯವರು ಇತ್ತೀಚೆಗೆ (ಜೂ. 4ರಂದು) ನಡೆದ ಎಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿ, ನೌಕರರು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಹಾಜರಿರುವಂತೆ ಸೂಚಿಸಿರುತ್ತಾರೆ. ಅದರಂತೆ ಎಲ್ಲಾ ಅಧಿಕಾರಿ, ನೌಕರರು ಕರ್ತವ್ಯ (ಕಾಮ್ಸ್) (KARTAVYA (KAAMS)) ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಂದಣಿ ಮಾಡಿಕೊಂಡು ಪ್ರತಿದಿನ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕಿರುತ್ತದೆ.

 ಜೂನ್ 16ರ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಇದುವರೆಗೂ 2,13,925 ಅಧಿಕಾರಿ, ನೌಕರರು ಕರ್ತವ್ಯ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಂದಾಯಿಸಿಕೊಂಡಿರುವುದಿಲ್ಲ. ಈ ಪ್ರಯುಕ್ತ ಇದುವರೆಗೂ ಕರ್ತವ್ಯ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಂದಾಯಿಸದ ಅಧಿಕಾರಿ, ನೌಕರರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವಂತೆ ಹಾಗೂ ಈ ಬಗ್ಗೆ ಕೈಗೊಂಡ ಕ್ರಮದ ವರದಿಯನ್ನು 7 ದಿನಗಳೊಳಗಾಗಿ ಸಲ್ಲಿಸುವಂತೆ ಸೂಚಿಸಿರುತ್ತಾರೆ.
 ಆದ್ದರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನಿರ್ದೇಶಿಸಿದಂತೆ, ಕೊಪ್ಪಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಗೊಳಪಡುವ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಮತ್ತು ನೌಕರರು ಕಡ್ಡಾಯವಾಗಿ ಕರ್ತವ್ಯ (ಕಾಮ್ಸ್) (KARTAVYA (KAAMS)) ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಂದಣಿ ಈ ವಿಷಯದಲ್ಲಿ ಕೈಗೊಂಡ ಕ್ರಮದ ಬಗ್ಗೆ ಮೂರು ದಿನಗಳ ಒಳಗಾಗಿ ವರದಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ತಪ್ಪದೇ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್