LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣದ ಕರಪತ್ರ ಬಿಡುಗಡೆ


ವಿಜಯಪುರ : ನ್ಯಾ|| ಬ್ರಿಜೇಶ್‌ಕುಮಾರ ನೇತೃತ್ವದ ೨ನೇ ನ್ಯಾಯಾಧಿಕರಣದ ತೀರ್ಪಿನಂತೆ ಆಲಮಟ್ಟಿ ಲಾಲ್‌ಬಹದ್ಧೂರ ಶಾಸ್ತ್ರೀ ಜಲಾಶಯದ ನೀರಿನಮಟ್ಟವನ್ನು ೫೧೯.೬೦ರಿಂದ ೫೨೪.೨೬೦ಕ್ಕೆ ನೀರು ನಿಲ್ಲಿಸಲು ಗೇಟ್ ಅಳವಡಿಸುವಂತೆ ನ್ಯಾಯಾಧೀಕರಣ ತಿರ್ಪು ನೀಡಿದ್ದರೂ ಕೂಡಾ ಇಲ್ಲಿಯವರೆಗೂ ಸರ್ಕಾರಗಳು ಗೇಟ್ ಅಳವಡಿಸಲು ಆಗುತ್ತಿಲ್ಲ. ೧೩ನೇ ವರ್ಷಕ್ಕೆ ಪಾದಾರ್ಪನೆ ಮಾಡಿದ್ದರು ಕೇಂದ್ರ ಸರ್ಕಾರ ಇನ್ನು ಅಧಿಸೂಚನೆ ಹೊರಡಿಸಿಲ್ಲ. ವಿಜಯಪುರ ಜಿಲ್ಲೆ ಹೇಳಿಕೊಳ್ಳಲು ಪಂಚನದಿಗಳು ಬೀಡಾಗಿದೆ ಆದರೆ ವಾಸ್ತವವಾಗಿ ಇನ್ನು ಕೆಲವು ಹಳ್ಳಿಗಳಲ್ಲಿ ಕುಡಿಯಲು ನೀರಿಲ್ಲ. ಕೃಷಿಗೆ ನೀರು ಬಿಡುವುದಂತು ದೂರದ ಮಾತು ಆದ್ದರಿಂದ ನಮ್ಮ ನೀರಿನ ಪಾಲನ್ನು ನಮಗೆ ಕೊಡಲು ಸರ್ಕಾರಕ್ಕೆ ಒತ್ತಾಯಿಸಲು ಹಾಗೂ ನೀರಿನ ಹಂಚಿಕೆಯಲ್ಲಿ ಅವಳಿ ಜಿಲ್ಲೆಯ ರೈತರಿಗೆ ಯಾವ ರೀತಿ ವಂಚನೆ ಮಾಡಿದ್ದಾರೆ ಎಂಬುದನ್ನು ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ ದಿನಾಂಕ ೦೮-೦೬-೨೦೨೬ ರಂದು ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಬೆಳ್ಳಿಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಕರಪತ್ರವನ್ನು ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಅಖಂಡ ಕರ್ನಾಟಕ ರೈತ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಜಂಟಿಯಾಗಿ ಬಿಡುಗಡೆಗೊಳಿಸಲಾಯಿತು. ದಿನಾಂಕ ೨೯ ರಿಂದ ಜಿಲ್ಲೆಯಾದ್ಯಂತ ಹಳ್ಳಿ ಹಳ್ಳಿಗಳಿಗೆ ರೈತರ ಬಳಿ ಹೋಗಿ ರೈತರನ್ನು ಜಾಗೃತಿಗೊಳಿಸಿ ವಿಚಾರ ಸಂಕಿರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಲು ಮನವಿ ಮಾಡಿಕೊಳ್ಳಲಾಗುವುದೆಂದು ತಿಳಿಸಿದ್ದಾರೆ. 
ಈ ಸಂದರ್ಭದಲ್ಲಿ ಅರವಿಂದ ಕುಲಕರ್ಣಿ, ಮಹಾದೇವಪ್ಪ ತೇಲಿ, ಸಿದ್ಧನಗೌಡ ಪಾಟೀಲ, ಉಮೇಶ ವಾಲೀಕಾರ, ಜಿಲ್ಲಾ ಸಂಘಟನ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ ಹೊನಕೇರಪ್ಪ ತೆಲಗಿ, ಬಬಲೇಶ್ವರ ತಾಲೂಕಾ ಗೌರವ ಅಧ್ಯಕ್ಷ ಸಿದ್ದಪ್ಪ ಕೋಟ್ಯಾಳ, ಬಬಲೇಶ್ವರ ತಾಲೂಕಾ ತಾಲೂಕಾಧ್ಯಕ್ಷ ಗುರಣಗೌಡ ಬಿರಾದಾರ, ಪ್ರಭುಲಿಂಗ ಕಾರಜೋಳ, ಸಂತೋಷ ಚೌರಿ, ಒಗೆಪ್ಪ ಬಿರಾದಾರ, ಸೋಮಯ್ಯ ನಂದಿಕೋಲ, ಅಮೋಗಿ ಉಕ್ಕಲಿ, ಮಲ್ಲಿಕಾರ್ಜುನ ಬಟಗಿ, ಬೋಗೇಶ ಸೊಲಾಪೂರ, ನೀಲಮ್ಮ ಕಟ್ಟಿಮನಿ, ಲಂಕೆಪ್ಪ ತಳವಾರ, ನಬಿರಸೂಲ ಬಿರಾದಾರ, ಗುರಪ್ಪ ತಳವಾರ, ಅಜೀಜ ಪಾಟೀಲ ಮುಂತಾದ ನೂರಾರು ರೈತರು ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್