ಬೆಂಗಳೂರು, ನವೆಂಬರ್ 22: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಮಾಡುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2017ರಿಂದ ಬಾಕಿ ಉಳಿದಿರುವ ಹಲವು ಪ್ರಕರಣಗಳ ತನಿಖೆಗೆ ಯಾವುದೇ ವಿವರಣೆ ನೀಡಿದೆ ಸುಪ್ರೀಂ ಕೋರ್ಟ್ ತಡಯಾಜ್ಞೆ ನೀಡಿದೆ. ಈ ಮೂಲಕ ನ್ಯಾಯಾಂಗ ಬಿಎಸ್ ಯಡಿಯೂರಪ್ಪ ಅವರ ಪರ ನಿಲುವು ತಾಳುತ್ತಿದೆ ಎಂದು ವಕೀಲ ಸಚಿನ್ ಆರೋಪಿಸಿದ್ದಾರೆ.
“ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಸೆಕ್ಷನ್ 19ಕ್ಕೆ ವಿರುದ್ಧವಾಗಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಚರ್ಚಿಸದೇ ಬಿಎಸ್ ಯಡಿಯೂರಪ್ಪ ಅವರು ಕೋರಿದ ತಕ್ಷಣ ಬಹುತೇಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.”
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.