LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಂಗಸಂಪದ ತಂಡದ ಎರಡು ದಿನಗಳ ರಂಗಾಭಿನಯ ಕಾರ್ಯಾಗಾರಕ್ಕೆ ಚಾಲನೆ 

ಬೆಳಗಾವಿ; ರಂಗಸಂಪದ ಬೆಳಗಾವಿಯ ತಂಡದ ಎರಡು ದಿನಗಳ ರಂಗಾಭಿನಯ ಕಾರ್ಯಾಗಾರ ಇವತ್ತು ಶನಿವಾರ ದಿ 25 ರಂದು ಬೆಳಿಗ್ಗೆಯ 10.30 ಕ್ಕೆ ಕನ್ನಡ ಸಾಹಿತ್ಯ ಭವನದಲ್ಲಿ ಪ್ರಾರಂಭವಾಯಿತು.14 ಮಹಿಳಾ ಮತ್ತು 11 ಪುರುಷ ಆಸಕ್ತ ಕಲಾವಿದರು ಭಾಗವಹಿಸುತ್ತಿರುವ ಈ ಕಾರ್ಯಾಗಾರವನ್ನು ಮುಖ್ಯ ಅತಿಥಿಗಳಾದ ಡಾ.ಬಸವರಾಜ ಜಗಜಂಪಿ ಅವರು ಸಸಿಗೆ ನೀರುಣಿಸಿ ಮತ್ತು ದಮಡಿ ಬಾರಿಸುವ ಮೂಲಕ ಉದ್ಘಾಟಿಸಿದರು. 
ನಂತರ ತಮ್ಮ ಉದ್ಘಾಟನಾ ಭಾಷಣದಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಕಾರ್ಯಾಗರದ ಪೂರ್ಣ ಸದುಪಯೋಗ ಪಡೆದುಕೊಳ್ಳಲು ಆಹ್ವಾನಿಸಿದರು..
ಸಂಪನ್ಮೂಲ ದಂಪತಿಗಳಾದ ಶ್ರೀಮತಿ ರಜನಿ ಮತ್ತು ಡಾ.ಪ್ರಕಾಶ ಗರುಡ ಅವರೂ ಸಹ ಸಸಿಗೆ ನೀರುಣಿಸಿ ದಮಡಿ ಬಾರಿಸುವ ಮೂಲಕ ಉದ್ಘಾಟಿಸಿದರು ಮತ್ತು ಕಲಾವಿದರಿಗೆ ಎರಡು ದಿನಗಳಲ್ಲಿ ಕಾರ್ಯಾಗಾರದಲ್ಲಿ ಪೂರ್ಣ ಸಹಭಾಗಿತ್ವ ಮಾಡಲು ಹೇಳಿದರು.
ಅಧ್ಯಕ್ಷ ಸ್ಥಾನ ವಹಿಸಿದ ಶ್ರೀ ಎಲ್ ಎಸ್ ಶಾಸ್ತ್ರೀ ಅವರು ಇಂತಹ ಅಪರೂಪದ ಕಾರ್ಯಾಗಾರ ಹಮ್ಮಿಕೊಂಡಿದ್ದಕ್ಕೆ ರಂಗಸಂಪದ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಡಾ.ಅರವಿಂದ ಕುಲಕರ್ಣಿಯವರು ಸ್ವಾಗತಿಸಿ  ಪ್ರಾಸ್ತಾವಿಕ ನುಡಿಗಳನ್ನಾಡಿದರು.ಶ್ರೀಮತಿಗಳಾದ ವೀಣಾ ಹೆಗಡೆ ಮತ್ತು ಪದ್ಮಾ ಕುಲಕರ್ಣಿಯವರು ಅತಿಥಿಗಳ ಪರಿಚಯ ಮಾಡಿದರು. ಶ್ರೀ ಪ್ರಸಾದ ಕಾರಜೋಳ ವಂದಿಸಿದರು.ಶ್ರೀ ಶರಣಯ್ಯ ಮಠಪತಿ ನಿರೂಪಿಸಿದರು.ಶ್ರೀ ಚಿದಾನಂದ ವಾಳಕೆ , ಶ್ರೀ ರಾಮಚಂದ್ರ ಕಟ್ಟಿ ಮತ್ತು ಶ್ರೀ ಬಸವರಾಜ ಹುಣಶೀಕಟ್ಟಿ ಸಹಕರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್