LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂತ್ರಸ್ತೆ ಅಪಹರಣ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬು ಎಸ್ಐಟಿ ಕಸ್ಟಡಿಗೆ

ಬೆಂಗಳೂರು06: ಅಶ್ಲೀಲ ವಿಡಿಯೋ ಸಂಬಂಧ ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬುರನ್ನು ಮೇ 13 ರವರೆಗೂ ವಿಶೇಷ ತನಿಖಾ ತಂಡ (ಎಸ್ಐಟಿ)ದ ಕಸ್ಟಡಿಗೆ ನೀಡಿ, ನಗರದ 17 ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.


''ಸತೀಶ್ ಬಾಬು ಪ್ರಕರಣದಲ್ಲಿ ಮುಖ್ಯವಾದ ಆರೋಪಿಯಾಗಿದ್ದು, ಅಪಹರಣಕ್ಕೊಳಗಾದ ಮಹಿಳೆಯನ್ನು ಕೆ.ಆರ್. ನಗರ, ಹೊಳೆನರಸೀಪುರ ಎಲ್ಲ ಕಡೆ ಸುತ್ತಾಡಿಸಿದ್ದಾನೆ. ಆಕೆಯನ್ನು ಎ-1 ಆರೋಪಿಯ ಬಳಿ ಬಿಟ್ಟಿದ್ದಾನೆ. ಆದ್ದರಿಂದ ಪ್ರಕರಣದಲ್ಲಿ ಯಾರ ಪಾತ್ರವಿದೆ ಎಂಬ ಸ್ಪಷ್ಟತೆಯ ಅಗತ್ಯ ಇರುವುದರಿಂದ 10 ದಿನಗಳ ಕಾಲ ಕಸ್ಟಡಿಗೆ ನೀಡಬೇಕು'' ಎಂದು ಎಸ್ಐಟಿ ಪರ ವಕೀಲರಾದ ಬಿ.ಎನ್. ಜಗದೀಶ್ ಅವರು ವಾದ ಮಂಡಿಸಿದ್ದರು.


ಮತ್ತೊಂದೆಡೆ, ''ಕೆ.ಆರ್.ನಗರದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಯಾವುದೇ ಮಾಹಿತಿ ನೀಡದೇ ಎಸ್ಐಟಿಗೆ ವರ್ಗಾಯಿಸಲಾಗಿದೆ. ಇದರಲ್ಲಿ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ'' ಎಂದು ಸತೀಶ್ ಬಾಬು ಪರ ವಕೀಲ ಪ್ರಮೋದ್ ಅವರು ಆಕ್ಷೇಪಿಸಿದ್ದರು.


ಮಹಿಳೆಯನ್ನು ಅಪಹರಿಸಲಾಗಿದೆ ಎಂದು ಆಕೆಯ ಪುತ್ರ ಮೇ 2 ರಂದು ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದರು. ಅದರ ಅನ್ವಯ ಸತೀಶ್ ಬಾಬುರನ್ನು ​ಪೊಲೀಸರು ಬಂಧಿಸಿದ್ದಾರೆ. ಬಳಿಕ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಎಸ್ಐಟಿಗೆ ವಹಿಸಲಾಗಿತ್ತು.


ಇದೇ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಅವರನ್ನೂ ಕೂಡ ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣ ಅವರನ್ನು ನ್ಯಾಯಾಲಯವು 4 ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿದೆ. ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್