LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಸೌದಿ ಅರೇಬಿಯಾ ರಾಜ ಮುಹಮ್ಮದ್ ಪಾಕಿಸ್ತಾನ ಪ್ರವಾಸ ದಿಢೀರ್ ಮುಂದೂಡಿಕೆ

ನವದೆಹಲಿ,11: ಸೌದಿ ಅರೇಬಿಯಾದ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರ ಬಹುನಿರೀಕ್ಷಿತ ಪಾಕಿಸ್ತಾನ ಪ್ರವಾಸ ದಿಢೀರ್ ಮುಂದೂಡಿಕೆಯಾಗಿದೆ. ಆದರೆ ಮುಂದಿನ ದಿನಾಂಕಗಳ ಬಗ್ಗೆ ಯಾವುದೇ ಅಧಿಕೃತ ಘೋಷಣೆಯೂ ಆಗಿಲ್ಲ. ಸಲ್ಮಾನ್ ಅವರ ಪಾಕ್ ಭೇಟಿ ದಿಢೀರ್ ರದ್ದುಗೊಳ್ಳುವುದಕ್ಕೆ ಸೌದಿ ಅರೇಬಿಯಾ ನಿಖರ ಕಾರಣವನ್ನೂ ತಿಳಿಸಿಲ್ಲ. ಎಲ್ಲವೂ ಅಂದುಕೊಂಡಂತೆಯೇ ನಡೆದಿದ್ದರೆ ಮೇ.19 ರಿಂದ 2 ದಿನಗಳ ಕಾಲ ಪಾಕ್ ಗೆ ಸಲ್ಮಾನ್ ಭೇಟಿ ನೀಡಬೇಕಿತ್ತು.

ಸೌದಿ ಅರೇಬಿಯಾದ ವಿದೇಶಾಂಗ ಇಲಾಖೆ ವಕ್ತಾರ ಮುಮ್ತಾಜ್ ಝೆಹ್ರಾ ಬಲೂಚ್ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಮುಂದಿನ ದಿನಾಂಕ ನಿಗದಿ ಬಗ್ಗೆ ಇಸ್ಲಾಮಾಬಾದ್-ರಿಯಾದ್ ನಡುವೆ ಮಾತುಕತೆ ನಡೆಯುತ್ತಿದ್ದು ಶೀಘ್ರವೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.




ಮಾರ್ಚ್‌ನಲ್ಲಿ ಪ್ರಧಾನಿ ಶೆಹಬಾಜ್ ಷರೀಫ್ ಸೌದಿಗೆ ಭೇಟಿ ನೀಡಿದ್ದ ನಂತರ ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ನಡುವಿನ ಇತ್ತೀಚಿನ ರಾಜತಾಂತ್ರಿಕ ಮತ್ತು ವ್ಯಾಪಾರಕ್ಕೆ ಸಂಬಂಧಿತ ಉನ್ನತ ಮಟ್ಟದ ಭೇಟಿ ನಡೆಯುವ ಸಾಧ್ಯತೆಯಿದೆ.

ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ನೆರವಿನ ನಿರೀಕ್ಷೆಯ ದೃಷ್ಟಿಯಿಂದ ಸೌದಿ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಪಾಕ್ ಭೇಟಿ ಮಹತ್ವ ಪಡೆದುಕೊಂಡಿತ್ತು.








ಮುಂಬರುವ ದಿನಗಳಲ್ಲಿ ಪಾಕಿಸ್ತಾನದಲ್ಲಿ USD 5 ಶತಕೋಟಿ ಮೌಲ್ಯದ ಸೌದಿ ಹೂಡಿಕೆಗಳನ್ನು ಆಕರ್ಷಿಸಲು ಮಕ್ಕಾದಲ್ಲಿ ಎರಡೂ ದೇಶಗಳ ನಡುವಿನ ಒಪ್ಪಂದವನ್ನು ಈ ಭೇಟಿ ಕಾರ್ಯರೂಪಕ್ಕೆ ತರುವ ನಿರೀಕ್ಷೆ ಇತ್ತು.

ಈ ಹಿಂದೆ 2019 ರ ಫೆಬ್ರವರಿಯಲ್ಲಿ ಮೊಹಮ್ಮದ್ ಬಿನ್ ಸಲ್ಮಾನ್ ಪಾಕ್ ಗೆ ಭೇಟಿ ನೀಡಿದ್ದರು. 2022 ರಲ್ಲಿಯೂ ಪಾಕ್ ಭೇಟಿ ನಿಗದಿಯಾಗಿತ್ತಾದರೂ ಕೊನೆ ಕ್ಷಣದಲ್ಲಿ ರದ್ದುಗೊಂಡಿತ್ತು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್