LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪರಿಸರ  ಉಳಿಸಿ, ಭವಿಷ್ಯ ಬೆಳಸಿ

  
ಬಳ್ಳಾರಿ,ಜೂ.೦6: ಪ್ರತಿಯೊಬ್ಬ  ವಿದ್ಯಾರ್ಥಿಯೂ ವರ್ಷಕ್ಕೊಂದು ಗಿಡ ನೆಟ್ಟು ಅದರ ಆರೈಕೆ ಮಾಡುವ ಸಂಕಲ್ಪ ಮಾಡಬೇಕು. ಪಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಹಸಿರು ಪರಿಸರ ಉಳಿದರೆ ಮಾತ್ರ ಮಾನವ ಜೀವನ ಸುಖಮಯವಾಗಿರುತ್ತದೆ.  ಆದ್ದರಿಂದ  ಪರಿಸರ  ಉಳಿಸಿ, ಭವಿಷ್ಯ ಬೆಳೆಸಿ, ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ವಾಸವಿ ವಿದ್ಯಾಲಯದಲ್ಲಿ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಶುಭಾರಂಭಗೊAಡಿತು. ಬಳಿಕ ಶಾಲಾ ಆವರಣದಲ್ಲಿ ಐದು ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ  ಚಾಲನೆ  ನೀಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿ , ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
೯ ನೇ ತರಗತಿಯ ವಿದ್ಯಾರ್ಥನಿ ಯಶಸ್ವಿನಿ ವಿಶ್ವ ಪರಿಸರ ದಿನದ ಮಹತ್ವದ ಕುರಿತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಬ್ದಾರಿಯಾಗಿದ್ದು, ಮರಗಳನ್ನು ನೆಡುವುದು ಹಾಗೂ ಪ್ರಕೃತಿಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ತಮ್ಮ ಭಾಷಣದಲ್ಲಿ  ತಿಳಿಸಿದರು.
ಶ್ರೀ ವಾಸವಿ ವಿದ್ಯಾಲಯವು ಹಸಿರು ವಾತಾವರಣದಿಂದ ಕೂಡಿದ ಶಾಲೆಯಾಗಿದ್ದು, ಶಾಲೆಯ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶವು ವಿವಿಧ ಮರಗಳು ಹಾಗೂ ಸಸ್ಯಗಳಿಂದ ಸಮೃದ್ಧವಾಗಿದೆ. ಹಸಿರಿನಿಂದ ಕಂಗೊಳಿಸುವ ಈ ಪರಿಸರವು ವಿದ್ಯಾರ್ಥಿಗಳಿಗೆ ಆರೋಗ್ಯಕರ ಹಾಗೂ ಕಲಿಕೆಗೆ ಪೂರಕವಾದ ವಾತಾವರಣವನ್ನು ಒದಗಿಸುತ್ತದೆ.ವಿದ್ಯಾರ್ಥಿಗಳಲ್ಲಿ  ಪ್ರಕೃತಿ ಪ್ರೇಮ ಮತ್ತು ಪರಿಸರ ಕಾಳಜಿಯನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ೪೪ ವರ್ಷಗಳಿಂದ  ನಡೆಸುತ್ತಿದೆ.    
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಆರ್.ವೈ.ಎಮ್ .ಇ.ಸಿ ಪ್ರೊಫೆಸರ್ ಡಾ. ಪ್ರಶಾಂತ್ ಕೇಣಿ,     ಶ್ರೀ ವಾಸವಿ ವಿದ್ಯಾಲಯದ ಕಾರ್ಯದರ್ಶಿಗಳಾದ ಪಿ.ಎನ್. ಸುರೇಶ್, ವಿಶೇಷ ಆಹ್ವಾನಿತರಾದ ರಾಮದುರ್ಗಂ ಸುರೇಶ್, ಪಿ. ಜಿ.ಗುಪ್ತಾ, ಮುಖ್ಯೋಪಾಧ್ಯಾರಾದ ವೀರೇಶ್.ಯು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.  ಈ ಕಾರ್ಯಕ್ರಮವನ್ನು  ಜಬೀನಾ ಬೇಗಂ, ಹೆಚ್, ಎಮ್ ಸುಜಾತ ಮತ್ತು ಬಸವರಾಜೇಶ್ವರಿ ಯವರು ನಿರ್ವಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್