LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ


ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ 9ನೇ ವಾರ್ಷಿಕ ಮಹಾಸಭೆಯನ್ನು ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ  ನಡೆಯಿತು.

ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ್ ವೆರ್ಣೇಕರ್ ಸಂಘದ ಸಾಧನೆಗಳು ಮತ್ತು ಬೆಳವಣಿಗೆಗಳ ಕುರಿತು ವಿವರಿಸಿದರು. ದಯಾನಂದ ನೇತಲ್ಕರ್ ಅವರ ನೇತೃತ್ವದಲ್ಲಿ 202629ರ ಹೊಸ ಆಡಳಿತ ಮಂಡಳಿಯನ್ನು ಆಯ್ಕೆ ಮಾಡಲಾಯಿತು.  ಒಟ್ಟು 25 ಸದಸ್ಯರ ಹೊಸ ಮಂಡಳಿಯನ್ನು ಸರ್ವಾನುಮತದಿಂದ ರಚಿಸಲಾಯಿತು
ಗಜಾನನ್ (ಮಾಣಿಕ್) ಎನ್ ಅಣವೇಕರ್  ಅಧ್ಯಕ್ಷರಾಗಿ, ವೈಭವ್ ಎಸ್ ವೆರ್ಣೇಕರ್  ಗೌರವ ಕಾರ್ಯದರ್ಶಿಯಾಗಿ, ಪ್ರಶಾಂತ್ ಡಿ ರೇವಣೇಕರ್  ಖಜಾಂಚಿಯಾಗಿ ಆಯ್ಕೆಯಾದರು. ಜೀವನ್ ಡಿ ವೆರ್ಣೇಕರ್ ಉಪಾಧ್ಯಕ್ಷರಾಗಿ, ನಾಗರಾಜ್ ಎಲ್ ವೆರ್ಣೇಕರ್ ಜಂಟಿ ಕಾರ್ಯದರ್ಶಿಯಾಗಿ, ಸಂಜಯ್ ಆರ್ ಅನ್ವೇಕರ್ ಜಂಟಿ ಖಜಾಂಚಿಯಾಗಿ ಆಯ್ಕೆಯಾದರು. 

ಹಿರಿಯ ಸಲಹಾ ಸಮಿತಿ ಸದಸ್ಯರಾದ ದಿನಾನಾಥ್ ಪಿ ರೇವಣೇಕರ್, ಪ್ರವೀಣ್ ಆರ್ ರೇವಣೇಕರ್, ಏಕನಾಥ್ ಆರ್ ಪೌಸ್ಕರ್, ಮಹಾಬಲೇಶ್ವರ ಶೇಜೆಕನ್ ಮೊದಲಾದವರು ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್