LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಟೈಲರಿಂಗ್ ವೃತ್ತಿಯಿಂದ ಮಹಿಳೆಯರಿಗೆ ಸ್ವಾವಲಂಬನೆ ; ಹಂಪಿ ರಮಣ

 ಬಳ್ಳಾರಿ, ಮಾ.13.: ಮಹಿಳೆಯರಿಗೆ ಯಾವುದೇ ಪದವಿ ಇಲ್ಲದೆ ಸಿಗುವ ಪ್ರಮಾಣ ಪತ್ರ ಎಂದರೆ ಅದು ಟೈಲರಿಂಗ್ ತರಬೇತಿ ಪ್ರಮಾಣ ಪತ್ರ ಇದರಿಂದ ತಮ್ಮ ಜೀವನವನ್ನು ಸ್ವಾವಲಂಬಿಯಾಗಿ ರೂಪಿಸಿಕೊಳ್ಳಬಹುದು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಹಂಪಿರಮಣ ತಿಳಿಸಿದರು.


ಅವರು ಇಂದು ನಗರದ ಸಿಂಧಿಗಿ ಕಾಂಪೌಂಡ್‌ನಲ್ಲಿ  ಪ್ರತಿಭಾ ಮಹಿಳಾ ಮಂಡಳಿ (ರಿ) ವತಿಯಿಂದ ಆಯೋಜಿಸಿದ್ದ ಟೈಲರಿಂಗ್ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿ  ಮಾತನಾಡಿ,

ಕಾರ್ಯಕ್ರಮದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಲು ಇಂತಹ ತರಬೇತಿ ಕಾರ್ಯಕ್ರಮಗಳು ಬಹಳ ಉಪಯುಕ್ತವಾಗುತ್ತವೆ ಎಂದು ಅಭಿಪ್ರಾಯ ಪಟ್ಟರು.


ಈ ಸಂದರ್ಭದಲ್ಲಿ ಪ್ರತಿಭಾ ಮಹಿಳಾ ಮಂಡಳಿ ಅಧ್ಯಕ್ಷೆ ಸುಜಾತ ರವಿಚಂದ್ರ ಮಾತನಾಡಿ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸಂಘಟನೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ವಕೀಲರಾದ ಸಾಧನ ಹಿರೇಮಠ, ವಿಶೇಷ ಅತಿಥಿಗಳಾಗಿ ವಕೀಲರಾದ ವಿಜಯಲಕ್ಷ್ಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸುಗುಣ,  ಪುಷ್ಪ ಭಾಗವಹಿಸಿ ಮಹಿಳೆಯರಿಗೆ ಶುಭಾಶಯ ಕೋರಿದರು.


ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಅನೇಕ ಮಹಿಳೆಯರು ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್