LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್.ಎಸ್.ಎಲ್.ಸಿ ಯಲ್ಲಿ ಶಗುಫ್ತಾ ಶಫಿಕ್ ಪಟೇಲ್ ಮಸಳಿಗೆ ೬೧೬ ಅಂಕ

ಇಂಡಿ: ಇತ್ತಿಚೆಗೆ ಜರುಗಿದ ೨೦೨೫-೨೬ನೇ ಸಾಲೀನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನ ಇಂಗಳಗಿ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಶಗುಫ್ತಾ ಶಫಿಕ್ ಪಟೇಲ್ ಮಸಳಿ ೬೨೫ ಅಂಕಗಳಿಗೆ ೬೧೬ ಅಂಕಗಳನ್ನು ಪಡೆದು ಶೇಕಡಾ ೯೮.೫೬% ರಷ್ಟು ಅಂಕಗಳನ್ನು ಪಡೆಯುವ ಮೂಲಕ ಗ್ರಾಮೀಣ ಭಾಗದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. 
ಪ್ರತಿಭಾನ್ವಿತ ವಿದ್ಯಾರ್ಥಿನಿ ಮೂಲತಹ ಕೃಷಿ ಮನೆತನದಲ್ಲಿ ಜನಿಸಿದ ಶಗುಫ್ತಾ ಶಫಿಕ್ ಪಟೇಲ್ ಮಸಳಿ ಅವರು ಒಟ್ಟು ೬೨೫ ಅಂಕಗಳಿಗೆ ೬೧೬ ಅಂಕಗಳನ್ನು ಗಳಿಸಿರುವ ಶಗುಫ್ತಾ ಕನ್ನಡ ಮತ್ತು ಹಿಂದಿ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಇವರ ಈ ಯಶಸ್ಸಿನಿಂದ ಇಡೀ ಇಂಗಳಗಿ ಗ್ರಾಮದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ.
ಮಗಳ ಈ ಅತ್ಯುನ್ನತ ಸಾಧನೆಯ ಬಗ್ಗೆ ಹೆಮ್ಮೆಯಿಂದ ಮಾತನಾಡಿರುವ ಶಗುಫ್ತಾ ಅವರ ತಂದೆ ಶಫಿಕ್ ಪಟೇಲ್ ಅವರು, "ನನ್ನ ಮಗಳ ಈ ಸಾಧನೆ ನಮಗೆ ಅತೀವ ಸಂತೋಷ ತಂದಿದೆ. ಅವಳು ಮೊದಲಿನಿಂದಲೂ ಓದಿನಲ್ಲಿ ಬಹಳ ಆಸಕ್ತಿ ಹೊಂದಿದ್ದಳು. ಸಮಯದ ವ್ಯರ್ಥ ಮಾಡದೆ ಶಿಸ್ತಿನಿಂದ ಅಭ್ಯಾಸ ಮಾಡುತ್ತಿದ್ದಳು. ಗ್ರಾಮೀಣ ಭಾಗದಲ್ಲಿ ಸೌಲಭ್ಯಗಳು ಕಡಿಮೆ ಇದ್ದರೂ, ಅವಳು ತೋರಿದ ದೃಢ ನಿರ್ಧಾರ ಇಂದು ಅವಳಿಗೆ ಈ ಮಟ್ಟದ ಯಶಸ್ಸನ್ನು ತಂದುಕೊಟ್ಟಿದೆ. ಅವಳು ಮುಂದೆ ಏನಾಗಬೇಕೆಂದು ಬಯಸುತ್ತಾಳೆಯೋ, ಅದಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ಒಬ್ಬ ತಂದೆಯಾಗಿ ಅವಳ ಶೈಕ್ಷಣಿಕ ಪ್ರಗತಿಯನ್ನು ನೋಡುವುದೇ ನನಗೆ ದೊಡ್ಡ ಹೆಮ್ಮೆ ಎಂದರು. ಅವರ ಮುಂದಿನ ಉನ್ನತ ವ್ಯಾಸಂಗಕ್ಕೆ ಇಡೀ ಗ್ರಾಮವೇ ಶುಭ ಹಾರೈಸಿದೆ.
ಈ ಸಂದರ್ಭದಲ್ಲಿ ಆನಂದ ಪವಾರ, ಹಸನ ಮುಜಾವರ, ಶಕೀಲ ಮಣ್ಣೂರ, ರಸುಪಟೇಲ ಮಸಳಿ, ಆಶೀಮ ಮುಲ್ಲಾ, ಪಾಂಡುರಂಗ ಜಾದವ, ಬಾಬು ಪಟೇಲ, ಬುಡ್ಡು ಮಣ್ಣುರ, ರಫೀಕಪಟೇಲ ಮಸಳಿ, ಬಾಬುಪಟೇಲ ಮಸಳಿ ಸೇರಿದಂತೆ ಇತರರು ಇದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್