LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾಮಾಜಿಕ ಜಾಲತಾಣಗಳಿಂದ ಮಕ್ಕಳಿಗೆ ಆಪತ್ತು: ಶಶಿಧರ್ ಕೋಸಂಬೆ

ಬಳ್ಳಾರಿ,02.- ಸಾಮಾಜಿಕ ಜಾಲತಾಣ ಹಾಗೂ ಮೊಬೈಲ್ ವ್ಯಸನದಿಂದ ಮಕ್ಕಳ ಭವಿಷ್ಯಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಹೇಳಿದರು.
ಶನಿವಾರ ನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಆಯ್ದ 5 ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ.42ರಷ್ಟು ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಮಕ್ಕಳು ದಿನಕ್ಕೆ 6ರಿಂದ 7 ಗಂಟೆಗಳ ಕಾಲ ಮೊಬೈಲ್‌ನಲ್ಲಿ ಕಳೆಯುತ್ತಿರುವುದು ಅವರ ಮೆದುಳಿನ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಪೋಷಕರು ಮಕ್ಕಳೊಂದಿಗೆ ಆಪ್ತವಾಗಿ ಕಾಲ ಕಳೆಯುವ ಮೂಲಕ ಅವರನ್ನು ಈ ವ್ಯಸನದಿಂದ ದೂರವಿಡಬಹುದು ಎಂದು ಕಿವಿಮಾತು ಹೇಳಿದರು.
1989ರ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ಸಹಿ ಹಾಕಿ ಮೂರು ದಶಕಗಳೇ ಕಳೆದರೂ, ಮಕ್ಕಳ ಸುರಕ್ಷತೆ ಇಂದಿಗೂ ಸವಾಲಾಗಿದೆ. ದೇಶದ ಶೇ.41ರಷ್ಟು ಹಾಗೂ ರಾಜ್ಯದ ಸುಮಾರು 2.5 ಕೋಟಿ ಮಕ್ಕಳ ರಕ್ಷಣೆಯ ಬಗ್ಗೆ ನಮ್ಮೆದುರು ಪ್ರಶ್ನೆಗಳಿವೆ. ಇತ್ತೀಚೆಗೆ ಶಾಲೆಗಳಲ್ಲಿ ಸಂಭವಿಸುತ್ತಿರುವ ವಿದ್ಯುತ್ ಸ್ಪರ್ಶದಂತಹ ದುರಂತಗಳು ಮತ್ತು ವಾಹನ ಅಪಘಾತಗಳು ಅಧಿಕಾರಿಗಳ ಬೇಜವಾಬ್ದಾರಿಗೆ ಸಾಕ್ಷಿಯಾಗಿವೆ. ಮಗು 18 ವರ್ಷ ತುಂಬುವವರೆಗೆ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸುವುದು ಎಲ್ಲರ ಹೊಣೆಯಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಭದ್ರಾದೇವಿ, ಡಿಡಿಪಿಐ ಬಿ.ಉಮಾದೇವಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತ್ರಿವೇಣಿ ಪತ್ತಾರ್, ಸದಸ್ಯೆ ಗೌಸಿಯಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್