LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಶೇಖ್ ಹಸೀನಾ ಪರಾರಿಯಾಗುತ್ತಿದ್ದಂತೆ ಪ್ರಧಾನಿ ನಿವಾಸದಲ್ಲಿ ಶಾಪಿಂಗ್ !

ಬಾಂಗ್ಲಾದೇಶದಿಂದ ಶೇಖ್ ಹಸೀನಾ ಪರಾರಿಯಾಗಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಅಲ್ಲಿ ಜನರು ಸಂಭ್ರಮಾಚರಣೆ ಮಾಡಿದ್ದಾರೆ. ಲಕ್ಷಾಂತರ ಜನರು ಪ್ರಧಾನಿಯವರ ಅಧಿಕೃತ ಸರ್ಕಾರಿ ಬಂಗಲೆಗೆ ನುಗ್ಗಿ, ಅಲ್ಲಿರುವ ಪೀಠೋಪಕರಣ, ಅಡುಗೆಮನೆಯ ವಸ್ತುಗಳು, ಬಾತುಕೋಳಿ, ಶೇಖ್ ಹಸೀನಾ ಅವರ ಸೀರೆ, ಒಡವೆಗಳು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ. ಶೇಖ್ ಹಸೀನಾ ಅವರ ಅಡುಗೆಮನೆಯಲ್ಲಿದ್ದ ಸ್ವೀಟ್​ಗಳನ್ನು ತಿನ್ನುತ್ತಾ ಅನೇಕರು ರೀಲ್ಸ್ ಮಾಡಿದ್ದಾರೆ. ಇನ್ನು ಕೆಲವರು ಪ್ರಧಾನಿಯ ಬೆಡ್​ರೂಂನಲ್ಲಿ ಮಲಗಿ ವಿಡಿಯೋ ಮಾಡಿಕೊಂಡಿದ್ದಾರೆ. ಶೇಖ್ ಹಸೀನಾ ಅವರ ಸೀರೆಗಳಿರುವ ಸೂಟ್​ಕೇಸ್ ಎತ್ತಿಕೊಂಡು ಹೊರಟ ವ್ಯಕ್ತಿಯೊಬ್ಬ ನನ್ನ ಹೆಂಡತಿಗೂ ಈ ಸೀರೆ ಉಡಿಸಿ ಪ್ರಧಾನಿಯಾಗಿ ಮಾಡುತ್ತೇನೆ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

ಶೇಖ್ ಹಸೀನಾ ರಾಜೀನಾಮೆ ನೀಡಿ, ದೇಶ ಬಿಟ್ಟು ಪರಾರಿಯಾಗುತ್ತಿದ್ದಂತೆ ಢಾಕಾದಲ್ಲಿರುವ ಪಿಎಂ ಪ್ಯಾಲೇಸ್‌ಗೆ ನುಗ್ಗಿದ ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಸೀರೆ, ಒಳಉಡುಪು, ಬ್ಲೌಸ್​ಗಳನ್ನೂ ಬಿಡದೆ ಎಲ್ಲವನ್ನೂ ಕದ್ದು, ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಸೋಫಾ, ಹಸಿ ಮೀನು, ಕೋಳಿ, ಬಾತುಕೋಳಿ, ಕುರಿ, ಫ್ಯಾನ್ ಎಲ್ಲವನ್ನೂ ತೆಗೆದುಕೊಂಡು ಜಾತ್ರೆಯಿಂದ ಮನೆಗೆ ಹೊರಟಂತೆ ರಸ್ತೆಗಳಲ್ಲಿ ನಡೆದುಕೊಂಡೇ ಮನೆಯತ್ತ ಮೆರವಣಿಗೆ ಹೊರಟಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್