LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀ ರಾಮ ಸೇನೆ ಪ್ರತಿಭಟನೆ

ಧಾರವಾಡ, ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಪರ ಮತ ಚಲಾಯಿಸದ ವಿಪಕ್ಷಗಳ ಮಹಿಳಾ ವಿರೋಧಿ ನಡೆ ಖಂಡಿಸಿ, ಧಾರವಾಡದ ವಿವೇಕಾನಂದ ವೃತ್ತದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಫೋಟೋ ಸುಟ್ಟು ಕರ್ನಾಟಕ ಶಿವಸೇನೆ ಮುಖಂಡರು  ಪ್ರತಿಭಟನೆ ಮಾಡಿದರು.
ಶಿವಸೇನಾ ರಾಜ್ಯ ವಕ್ತಾರ ಎಸ್. ಭಾಸ್ಕರನ್ ಪ್ರತಿಭಟನೆಯಲ್ಲಿ ಮಾತನಾಡಿ, ಸುಮಾರು 70 ವರ್ಷದಿಂದ ಮಹಿಳೆಯರಿಗೆ 33% ಮೀಸಲಾತಿ ಶಾಸಕಾಂಗದಲ್ಲಿ ನೀಡಬೇಕಾದದ್ದು,  ಪ್ರಜಾಪ್ರಭುತ್ವದ ಆಶಯವಾಗಿದೆ.. ಅದಕ್ಕೆ ಪೂರಕವಾಗಿ NDA ಕೇಂದ್ರ ಸರ್ಕಾರ ಬಿಲ್ ಲೋಕಸಭೆಯಲ್ಲಿ ಮತಕ್ಕೆ ಹಾಕಿದಾಗ ಕಾಂಗ್ರೇಸ್,ತೃಣಮೂಲ ಕಾಂಗ್ರೇಸ್, DMK ಸೇರಿದಂತೆ ವಿರೋಧ ಪಕ್ಷಗಳು ವಿರೋಧಿಸಿ ಮತ ಚಲಾಯಿಸಿದ್ದು ಮಹಿಳೆಯರ ಹಕ್ಕುಗಳಿಗೆ ದ್ರೋಹ ಬಗೆದಿವೆ.
ಈ ಹಿನ್ನೆಲೆಯಲ್ಲಿ ದೇಶದ ಜನಸಂಖ್ಯೆ ಅರ್ಧ ಭಾಗವಿರುವ ಮಹಿಳಾ ಶಕ್ತಿಗೆ ಅವಮಾನವಾಗಿದ್ದು, ತಕ್ಷಣವೇ ಕ್ಷಮೆ ಕೇಳಿ ಬಿಲ್ ಗೆ ಬೆಂಬಲಿಸಲು ಆಗೃಹಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕುಲಕರ್ಣಿ ಮಾತನಾಡಿ, ಈ ದ್ರೋಹಕ್ಕೆ ಬರುವ ಚುನಾವಣೆಗಳಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸಲು ಕರೆ ನೀಡಿದರು. ಕೇವಲ 2000 ರೂ ಹಾಗೂ ಫ್ರಿ ಬಸ್ ಗೆ ಮಾತ್ರ ಇವರ ಮಹಿಳಾ ಪ್ರೀತಿ ಎಂದು ಕಿಡಿಕಾರಿದರು.       
ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ  ಆರತಿ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್ ಸಾವಂತ, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಜೋಶಿ, ನಗರ ಅಧ್ಯಕ್ಷ ನವೀನ್ ರಾಠಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಚಾಣಕ್ಯ, ನಗರ ಉಪಾಧ್ಯಕ್ಷ ಅಕ್ಷಯ ಕದಂ, ಮಹಿಳಾ ಉಪಾಧ್ಯಕ್ಷ ಶ್ರೀಮತಿ ಹಡಪದ  ಭಾಗವಹಿಸಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್