LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಸ್‌ಸಿ, ಎಸ್‌ಟಿ ಕಲ್ಯಾಣ ಕಾರ್ಯಕ್ರಮ ಶೇ.100ರಷ್ಟು ಸಾಧಿಸಿ: ಸಿದ್ದರಾಮಯ್ಯ ಖಡಕ್‌ ಸೂಚನೆ

ಬೆಂಗಳೂರು: ಕಳೆದ ವರ್ಷ ಎಸ್ಸಿ ಎಸ್ಪಿ/ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಎಸ್ಸಿ ಎಸ್ಪಿ/ಟಿಎಸ್ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್