LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಡಾ ಹಗರಣದ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್​ಮೇಲ್ : ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಮುಡಾ ಹಗರಣದ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್​ಮೇಲ್ ತಂತ್ರ ಮಾಡುತ್ತಿದೆ. ಇಲ್ಲದ ಹಗರಣವನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.


ಇಂದು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಮುಡಾ ವಿಚಾರದಲ್ಲಿ ಬ್ಲ್ಯಾಕ್​ಮೇಲ್ ತಂತ್ರ ಮಾಡುತ್ತಿದ್ದಾರೆ. ಇಲ್ಲದ ಹಗರಣವನ್ನು ಸೃಷ್ಟಿಸುತ್ತಿದ್ದಾರೆ. ಬಿಜೆಪಿಯವರಿಗೆ ಯಾವ ಐಡಿಯಾಲಜಿಗಳೂ ಇಲ್ಲ. ಅವರು ಯಾವತ್ತು ನ್ಯಾಯದ ಪರವಾಗಿಲ್ಲ. ಈಗಾಗಲೇ ಮುಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ. ಇದಕ್ಕಿಂತ ಇನ್ನೇನು ಬೇಕು ಎಂದರು.


ನ್ಯಾಯಾಂಗ ತನಿಖೆಯನ್ನು ಕೇಂದ್ರ ಸಚಿವರು ಅನುಮಾನದಿಂದ ನೋಡಿದರೆ ಅದರಲ್ಲಿ ಅರ್ಥ ಇದೆಯಾ?. ಬಿಜೆಪಿ ಕಾಲದಲ್ಲಿ ಎಷ್ಟು ಭ್ರಷ್ಟಾಚಾರಗಳು ನಡೆದಿವೆ. ಯಾವುದಾದರೂ ನ್ಯಾಯಾಂಗ ತನಿಖೆಗೆ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ನಮ್ಮ ಅವಧಿಯಲ್ಲಿ 7-8 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇವೆ ಎಂದು ಹೇಳಿದರು.


ಮುಡಾ ಹಗರಣ ವಿಚಾರದಲ್ಲಿ ನನಗೆ ಯಾವ ಬೇಸರವಿಲ್ಲ. ತಪ್ಪೇ ಮಾಡಿಲ್ಲ ಅಂದ್ರೆ ಬೇಸರ ಯಾಕೆ?. 40 ವರ್ಷ ರಾಜಕಾರಣದಲ್ಲಿ ನನ್ನ ಮೇಲೆ ಬಹಳ ಆರೋಪಗಳು ಬಂದಿವೆ. ಇದನ್ನು ರಾಜಕೀಯವಾಗಿ ಎದುರಿಸುತ್ತೇನೆ. ಬಿಜೆಪಿಯವರು ಪಾದಯಾತ್ರೆ ಮಾಡುವುದಾದರೆ ಮಾಡಲಿ. ಅದನ್ನು ರಾಜಕೀಯವಾಗಿ ಎದುರಿಸಲು ನಾವೂ ಸಹ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ