LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಯಾರ್ಥಿಗಳಿಂದ ಸ್ವಚ್ಛತೆಗಾಗಿ ಸಹಿ ಸಂಗ್ರಹಣೆ ಅಭಿಯಾನ


ಮುದ್ದೇಬಿಹಾಳ ಫೆ., ೦೨- ಪುರಸಭಾ ವ್ಯಾಪ್ತಿಯಲ್ಲಿ ಇಂದು ಸ್ವಚ್ಛ ಭಾರತ್ ಮಿಷನ್ (ಎಸ್‌ಬಿಎಂ) 2.0 ನಗರ ಯೋಜನೆಯಡಿ ಐಇಸಿ (IEC) ಕಾರ್ಯಕ್ರಮವಾಗಿ ಸ್ವಚ್ಛತಾ ರ‍್ಯಾಲಿಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಸರ್ಕಾರಿ ಗಂಡು ಮಕ್ಕಳ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಮಹತ್ವದ ಕುರಿತು ಸಮಗ್ರ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ನಿಷೇಧ, ತ್ಯಾಜ್ಯ ವಿಂಗಡಣೆ, ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಕುರಿತು ಮಾಹಿತಿ ನೀಡಲಾಗಿದ್ದು, ಸ್ವಚ್ಛ ನಗರ ನಿರ್ಮಾಣದ ಸಂಕಲ್ಪದೊಂದಿಗೆ ವಿದ್ಯಾರ್ಥಿಗಳಿಂದ ಸ್ವಚ್ಛತೆಗಾಗಿ ಸಹಿ ಸಂಗ್ರಹಣೆ ಅಭಿಯಾನವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ಪುರಸಭೆಯ ಆಫೀಸ್ ಮ್ಯಾನೇಜರ್ ಹೆಚ್.ಎ. ದಲಾಯತ್, ಆರೋಗ್ಯ ನಿರೀಕ್ಷಕರು ಜಾವೇದ್ ಅಹ್ಮದ್, ನಾಯ್ಕೋಡಿ ಮಹಂತೇಶ್ ಕಟ್ಟಿಮನಿ, ಪುರಸಭೆಯ ಇತರೆ ಸಿಬಂದಿಗಳು, ಶಾಲೆಯ ಮುಖ್ಯಗುರುಗಳು, ಶಿಕ್ಷಕರು, ಹಾಗೂ ಕಮ್ಯೂನಿಟಿ ಮೊಬ್ಲೈಜರ್ ಸಿಬಂದಿಗಳು ಭಾಗವಹಿಸಿದ್ದರು. ಶಾಲಾ ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಚ್ಛತಾ ಸಂದೇಶವನ್ನು ಪರಿಣಾಮಕಾರಿಯಾಗಿ ಸಾರಿದರು.

ಪರಿಸರ ಸಂರಕ್ಷಣೆಯ ಉದ್ದೇಶದಿಂದ ಬಟ್ಟೆ ಕೈಚೀಲಗಳ ಬಳಕೆಗೆ ಉತ್ತೇಜನ ನೀಡುವಂತೆ ಶಾಲಾ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಲಾಯಿತು. ಜೊತೆಗೆ, ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸಿ ಸಂಗ್ರಹಿಸಲು ಅನುಕೂಲವಾಗುವಂತೆ ಶಾಲೆಗಳಿಗೆ ವಿಶೇಷ ತ್ಯಾಜ್ಯ ಸಂಗ್ರಹ ಡಬ್ಬಿಗಳನ್ನು ವಿತರಿಸಲಾಯಿತು.

ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರವಹಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್