LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂಸದ ಪ್ರಜ್ವಲ್ ರೇವಣ್ಣರನ್ನ ಆರ್ಥಿಕವಾಗಿ ಇಕ್ಕಟ್ಟಿಗೆ ಸಿಲುಕಿಸಲು ಎಸ್ಐಟಿ ತಂತ್ರ

ಬೆಂಗಳೂರು,18: ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕುರಿತು ಸುಳಿವಿಲ್ಲ‌. ಪ್ರಕರಣ ದಾಖಲಾಗುತ್ತಿದ್ದಂತೆ ಮೇ 1ರಂದು ತಮ್ಮ ಎಕ್ಸ್ ಖಾತೆಯ ಮೂಲಕ ಪ್ರತಿಕ್ರಿಯಿಸಿದ್ದ ಪ್ರಜ್ವಲ್ ರೇವಣ್ಣ, 'ತಾನು ಬೆಂಗಳೂರಿನಲ್ಲಿ ಇರದ ಕಾರಣ ಎಸ್ಐಟಿ ಮುಂದೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ 7 ದಿನಗಳ ಕಾಲಾವಕಾಶ ನೀಡಬೇಕು' ಎಂದಿದ್ದರು. ಆದರೆ ಎರಡು ವಾರಗಳೇ ಕಳೆದರೂ ಸಹ ಪ್ರಜ್ವಲ್ ರೇವಣ್ಣ ಭಾರತಕ್ಕೆ ಮರಳಿಲ್ಲ. ಆದ್ದರಿಂದ ಅವರನ್ನ ಕಾನೂನಾತ್ಮಕವಾಗಿ ಕಟ್ಟಿಹಾಕಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.


ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನ ಆರ್ಥಿಕವಾಗಿ ಇಕ್ಕಟ್ಟಿಗೆ ಸಿಲುಕಿಸಲು ಎಸ್ಐಟಿ ತಂತ್ರ ರೂಪಿಸಿದ್ದು, ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳನ್ನ ಫ್ರೀಜ್ ಮಾಡಿಸಲು ಎಸ್‌ಐಟಿ ಅಧಿಕಾರಿಗಳು ತಯಾರಿ ಆರಂಭಿಸಿದ್ದಾರೆ. ಆದ್ದರಿಂದ ಪ್ರಜ್ವಲ್ ಅವರ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳು ಕಲೆ ಹಾಕುತ್ತಿರುವುದಾಗಿ ಎಸ್ಐಟಿಯ ಉನ್ನತ ಮೂಲಗಳು ಖಚಿತಪಡಿಸಿವೆ.


ತಂದೆಯ ಬಂಧನದ ನಂತರ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುವ ನಿರೀಕ್ಷೆಯಿತ್ತು. ಆದರೆ ಮೇ 3 ಹಾಗೂ ಮೇ 15ರಂದು ಭಾರತಕ್ಕೆ ಬರಲು ಸಿದ್ದವಾಗಿದ್ದ ಪ್ರಜ್ವಲ್, ವಿಮಾನದ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್