ಹಸಿರು ಕ್ರಾಂತಿ ವರದಿ ಬೆಳಗಾವಿ
ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ ಹಾಗೂ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಖಾನಾಪುರ ಶಾಖೆ ಸಹಯೋಗದೊಂದಿಗೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರ ಆ.1 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಕೇದಾರ ಮಂಗಲ ಕಾರ್ಯಾಲಯದಲ್ಲಿ ಜರುಗಲಿದೆ.
ಹಣಕಾಸು ಸಾಕ್ಷರತೆ ಜವಾಬ್ದಾರಿಯುತ ಸಾಲ, ಕ್ರೆಡಿಟ್ ಶಿಸ್ತು, ಡಿಜಿಟಲ್ ವಂಚನೆಗಳ ತಡೆಗಟ್ಟುವಿಕೆ ವಿಷಯ ಕುರಿತು ಕಾರ್ಯಾಗಾರ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಖಾನಾಪುರ ತಾಲೂಕಿನ ತಹಸೀಲ್ದಾರ್ ದುಂಡಪ್ಪ ಕೋಮಾರ, ಎಸ್ಬಿಐ ಮ್ಯಾನೇಜರ್ ಚಂದ್ರಕಾಂತ ಮಾನೆ, ಖಾನಾಪುರ ಪೊಲೀಸ್ ಇನ್ಸ್ಪೆಕ್ಟರ್ ಎಲ್.ಎಚ್.ಗೌಂಡಿ, ತಾಲೂಕು ಆರೋಗ್ಯ ಅಧಿಕಾರಿ ಎಂ.ವಿ.ಕಿವಡಸನ್ನನವರ ಭಾಗವಹಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ನ ಬೆಳಗಾವಿ ವಿಭಾಗೀಯ ವ್ಯವಸ್ಥಾಪಕ ರವಿ ಎಸ್.ಎನ್ ಹಾಗೂ ಬೆಳಗಾವಿ ಪ್ರಾದೇಶಿಕ ವ್ಯವಸ್ಥಾಪಕ ಮಾದೇಗೌಡ.ಸಿ ವಹಿಸುವರು. ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಖಾನಾಪುರ ಶಾಖೆ, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಬೆಳಗಾವಿ ಪ್ರಾದೇಶಿಕ ವ್ಯವಸ್ಥಾಪಕರಾದ ಸಂತೋಶ ಬಿ.ಮಲ್ಲನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.