LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

32 ಲಕ್ಷ ಮುಸ್ಲಿಮರಿಗೆ 'ಸೌಗಾತ್-ಎ-ಮೋದಿ' ಕಿಟ್ ವಿತರಣೆ

ನವದೆಹಲಿ: ಈದ್ ಹಬ್ಬಕ್ಕೆ ಮುಂಚಿತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಲ್ಪಸಂಖ್ಯಾತ ಮೋರ್ಚಾ "ಸೌಗಾತ್-ಎ-ಮೋದಿ" ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಅಭಿಯಾನದ ಅಂಗವಾಗಿ ದೇಶಾದ್ಯಂತದ 32 ಲಕ್ಷ ದೀನದಲಿತ ಮುಸ್ಲಿಮರಿಗೆ ವಿಶೇಷ ಕಿಟ್​ಗಳನ್ನು ಬಿಜೆಪಿ ವಿತರಿಸಲಿದೆ.


ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್​ನಿಂದ ಅಭಿಯಾನ ಪ್ರಾರಂಭವಾಗಿದೆ. ಬಡ ಮುಸ್ಲಿಂ ಕುಟುಂಬಗಳು ಕೂಡ ಯಾವುದೇ ಸಮಸ್ಯೆ ಇಲ್ಲದೆ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶದಿಂದ ಅವರಿಗೆ ಕಿಟ್​ಗಳನ್ನು ನೀಡಲಾಗುತ್ತಿದೆ. ಅಭಿಯಾನದ ಭಾಗವಾಗಿ, 32,000 ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ದೇಶಾದ್ಯಂತ 32,000 ಮಸೀದಿಗಳ ಸಹಕಾರದೊಂದಿಗೆ ಕೆಲಸ ಮಾಡಲಿದ್ದಾರೆ.


ಅಭಿಯಾನದ ವಿಶಾಲ ದೃಷ್ಟಿಕೋನವನ್ನು ವಿವರಿಸಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ, "ಪವಿತ್ರ ರಂಜಾನ್ ತಿಂಗಳು ಮತ್ತು ಮುಂಬರುವ ಈದ್, ಗುಡ್ ಫ್ರೈಡೆ, ಈಸ್ಟರ್, ನವರೋಜ್ ಮತ್ತು ಭಾರತೀಯ ಹೊಸ ವರ್ಷದಂಥ ಸಂದರ್ಭಗಳಲ್ಲಿ ಅಲ್ಪಸಂಖ್ಯಾತ ಮೋರ್ಚಾ "ಸೌಗಾತ್-ಎ-ಮೋದಿ" ಅಭಿಯಾನದ ಮೂಲಕ ಅಗತ್ಯವಿರುವ ಜನರಿಗೆ ಸಹಾಯ ಒದಗಿಸಲಿದೆ" ಎಂದು ಹೇಳಿದರು. ಇದಲ್ಲದೆ ಜಿಲ್ಲಾ ಮಟ್ಟದಲ್ಲಿ ಈದ್ ಮಿಲನ್ ಆಚರಣೆಯನ್ನು ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್