LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ | ವಿವಿಧ ರಾಜಕೀಯ ಪ್ರತಿನಿಧಿಗಳೊಂದಿಗೆ ಸಭೆ

ಬಾಗಲಕೋಟೆ, ಜುಲೈ ೩೧ : ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಜುಲೈ ೩೦ ವರೆಗೆ ಒಟ್ಟು ೧೩,೫೧,೪೬೧ ಗಣತಿ ನಮೂನೆಗಳ ಡಿಜಿಟಲೀಕರಣವಾಗಿರುವುದಾಗಿ ಜಿಲ್ಲಾಧಿಕಾರಿ ಸಂಗಪ್ಪ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಪ್ರಗತಿ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಲ್ಲಿಯವರೆಗೆ ಆಗಿರುವ ಪ್ರಗತಿಯ ಮಾಹಿತಿಯನ್ನು ತಿಳಿಸಿದರು. ಜಿಲ್ಲೆಯ ೭ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ೧೬,೩೧,೨೦೨ ಮತದಾರರಿದ್ದು, ಈ ಎಲ್ಲ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿಯವರೆಗೆ ಒಟ್ಟು ೧೩,೫೧,೪೬೧ ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದ್ದು, ೯೧,೧೮೭ ಡಿಜಿಟಲೀಕರಣಕ್ಕೆ ಬಾಕಿ ಉಳಿದಿವೆ ಎಂದು ತಿಳಿಸಿದರು.
ಪ್ರತಿದಿನ ಬಿಎಲ್‌ಓಗಳು ಭೌತಿಕ ಪರಿಶೀಲನೆಯೊಂದಿಗೆ ಗುರುತಿಸಿದ ಗೈರು, ಸ್ಥಳಾಂತರ, ನಿಧನ ಡ್ಯೂಪ್ಲಿಕೇಟ ಆದಂತಹ ಮತದಾರರ ವಿವರಗಳನ್ನು ತಮ್ಮ ಆಪ್‌ನಲ್ಲಿ ಅಪ್ಲೋಡ್ ಮಾಡಿರುತ್ತಾರೆ. ಪರಿಶೀಲನೆ ಕಾರ್ಯದಲ್ಲಿ ಒಟ್ಟು ೧೦,೮೪೦ ಗೈರು ಮತದಾರರು ಇದ್ದು, ಸ್ಥಳಾಂತರಗೊಂಡ ಮತದಾರರ ಸಂಖ್ಯೆ ೧,೧೩,೬೯೦, ನಿಧನ ಹೊಂದಿರುವ ಮತದಾರರ ಸಂಖ್ಯೆ ೪೧,೨೩೯, ಡ್ಯೂಪ್ಲಿಕೇಟ್ ಮತದಾರರ ಸಂಖ್ಯೆ ೨೧,೯೫೮, ಇತರೆ ೮೨೭ ಮತದಾರರು ಇದ್ದಾರೆ. ಬಿಎಲ್‌ಓಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ನಿಮ್ಮ ಪಕ್ಷದ ವತಿಯಿಂದ ನೇಮಿಸಿದ ಮತಗಟ್ಟೆ ಮಟ್ಟದ ಏಜೆಂಟರುಗಳಿಗೆ ಭಾಗವಾರು ಎ.ಎಸ್.ಡಿಡಿಗಳ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಎ.ಎಸ್.ಡಿ.ಡಿ ಪಟ್ಟಿಯಲ್ಲಿ ಯಾವುದೇ ರೀತಿಯ ಆಕ್ಷೇಪಣೆಗಳು ಇದ್ದಲ್ಲಿ ಸಂಬಂಧಪಟ್ಟ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಮತದಾರರ ನೋಂದಣಾಧಿಕಾರಿಗಳ ಗಮನಕ್ಕೆ ತರಲು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಎಲ್ಲ ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಮತಗಟ್ಟೆ ಮಟ್ಟದ ಏಜೆಂಟರುಗಳ ಸಂಪೂರ್ಣವಾಗಿ ಸಹಕಾರ ನೀಡಿದ್ದಾರೆ. ಇದೇ ರೀತಿಯ ಪರಿಷ್ಕರಣೆ ಕಾರ್ಯ ಪೂರ್ಣಗೊಳ್ಳುವವರೆಗೆ ತಮ್ಮ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕ ಅಧಿಕಾರಿ ಬಿ.ಎಸ್.ಕಡಕಬಾವಿ, ಚುನಾವಣಾ ವಿಭಾಗದ ಮಹೇಶ ಪಾಂಡವ ಸೇರಿದಂತೆ ವಿವಿಧ ರಾಜಕೀಯ ಪ್ರತಿನಿಧಿಗಳಾದ ಮಲ್ಲಿಕಾರ್ಜುನ ಕಾಂಬಳೆ, ಪ್ರಭು ಹಳ್ಳೂರ, ಶರಥ ಪಾಟೀಲ, ಮಲ್ಲಿಕಾರ್ಜುನ ಮುತ್ತಪ್ಪನವರ, ಶಿವಾನಂದ ಸುರಪುರ ಹಾಗೂ ಇತರರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್